ಕ್ರೈಂ

ಭೀಕರ ಅಪಘಾತ, ಒಂದೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ

337

ನ್ಯೂಸ್ ನಾಟೌಟ್: ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಶನಿವಾರ  ಬೆಳಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದಿದ್ದು ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ ಮೂರು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಕಾರು ಅಪ್ಪಚ್ಚಿಯಾಗಿದೆ. ಮೂವರ ಮೃತದೇಹವನ್ನು ಹರಸಾಹಸ ಮಾಡಿ ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.

ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ ಸಿಕ್ಕಿ ಹಾಕಿಕೊಂಡು ಅಪ್ಪಚ್ಚಿಯಾಗಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಬೆಂಗಳೂರು ಮೂಲದೆಂದು ತಿಳಿದು ಬಂದಿದ್ದು ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ. ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆಗೆಯಲಾಗಿದೆ. ದಂಪತಿಗಳು ಮೂವತ್ತು ವರ್ಷದೊಳಗಿನವರೆಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

See also  ಬೆಂಗಳೂರಿನ ಮೂರು 5 ಸ್ಟಾರ್ ಹೋಟೆಲ್ ​ಗಳಿಗೆ ಬಾಂಬ್​ ಬೆದರಿಕೆ..!ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಇ-ಮೇಲ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget