ಕರಾವಳಿಸುಳ್ಯ

ಕಡಬ:ಕಾರು ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ;ಬಾಲಕ ಸ್ಥಳದಲ್ಲೇ ದುರ್ಮರಣ,ತಂದೆ-ಪುತ್ರಿಗೆ ಗಂಭೀರ ಗಾಯ

178

ನ್ಯೂಸ್ ನಾಟೌಟ್ : ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶುಕ್ರವಾರ ತಡರಾತ್ರಿ ಕಡಬ ಸಮೀಪದ ಕಳಾರದಲ್ಲಿ ಸಂಭವಿಸಿದೆ.ಘಟನೆಯಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಕೂಟರ್ ಚಲಾಯಿಸುತ್ತಿದ್ದ ಚಂದ್ರಶೇಖರ ಹಾಗೂ ಅವರ ಪುತ್ರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರು ನಿನ್ನೆ(ಡಿ.೧೫) ಸಾಯಂಕಾಲ ವೇಳೆ ಸರಸ್ವತಿ ಶಾಲೆಗೆ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವಕ್ಕೆಂದು ತೆರಳಿದ್ದರು.ಈ ವೇಳೆ ಕಾರ್ಯಕ್ರಮ ಮುಗಿಸಿ ವಾಪಾಸ್‌ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಚಂದ್ರಶೇಖರರವರು ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಬರುತ್ತಿದ್ದರು.ಈ ವೇಳೆ ಪಂಜ ಸಮೀಪದ ಕೂತ್ಕುಂಜದವರಾದ ಪರಮೇಶ್ವರ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ‌ ಎನ್ನಲಾಗಿದೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಗೆ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget