Latestಕ್ರೈಂವೈರಲ್ ನ್ಯೂಸ್

ಟೈರ್‌ ಸ್ಫೋಟಗೊಂಡು ಡಿವೈಡರ್‌ ಗೆ ಗುದ್ದಿದ ಇನ್ನೋವಾ ಕಾರು..! ಪೊಲೀಸ್‌ ಸೇರಿ ಮೂವರು ಸಾವು..!

482
Pc Cr: Public Tv

ನ್ಯೂಸ್ ನಾಟೌಟ್: ಇನ್ನೋವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್‌ ಗೆ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಶರವಣ (31), ಸೇಂದಿಲ್ (29)‌ ಎಂದು ಗುರುತಿಸಲಾಗಿದೆ. ಮೃತ ಅರ್ಜುನ್ ಚೆನ್ನೈನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಡಿಕ್ಕಿಯ‌ ರಭಸಕ್ಕೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಅಪಘಾತದಲ್ಲಿ ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾ‌ರ್, ರಮೇಶ್ ಮತ್ತು ಗೌತಮ್ ಎಂಬವರು ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಕ್ಕಾಗಿ ಗೋವಾಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.  

ಅನ್ನಭಾಗ್ಯದ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ..! ಕಾಳಸಂತೆಗೆ ಹೋಗುತ್ತಿದ್ದ 40 ಟನ್ ಅಕ್ಕಿ ಜಪ್ತಿ..!

See also  ಗಂಡ ಮತ್ತು ಮಗುವಿನ ಮುಂದೆ ತನಗೆ ತಾನೇ ಅಂತ್ಯಕ್ರಿಯೆ ಮಾಡಿಕೊಂಡ ಮಹಿಳೆ..! ಎನಿದು ವಿಚಿತ್ರ ಘಟನೆ..?
  Ad Widget   Ad Widget     Ad Widget   Ad Widget   Ad Widget   Ad Widget