Latestಕ್ರೈಂವೈರಲ್ ನ್ಯೂಸ್

ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ATMನಿಂದ 30 ಲಕ್ಷ ರೂ. ಹಣ ದೋಚಿದ ಕಳ್ಳರು..! ಗ್ಯಾಸ್ ಕಟರ್ ಮೂಲಕ ಎಟಿಎಂ ಮಷಿನ್ ತುಂಡರಿಸಿದ ಕದೀಮರು..!

429

ನ್ಯೂಸ್‌ ನಾಟೌಟ್ : ಗ್ಯಾಸ್ ಕಟರ್ ಮೂಲಕ ಎಟಿಎಂ ಮಷಿನ್ ಕಟ್ ಮಾಡಿರುವ ಕದೀಮರು, ಎಟಿಎಂನಲ್ಲಿದ್ದ 30 ಲಕ್ಷ ಹಣದೊಂದಿಗೆ ಪರಾರಿಯಾಗಿರುವ ಘಟನೆ ಹೊಸಕೋಟೆಯಲ್ಲಿ ಇಂದು(ಮಾ.01) ಮುಂಜಾನೆ ನಡೆದಿದೆ.

ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಮಾರ್ಚ್ 1ರ ಮುಂಜಾನೆ 3 ಗಂಟೆ ಸಮಯದಲ್ಲಿ ಕೃತ್ಯ ನಡೆದಿದೆ. ಆಂಧ್ರ ಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿರುವ ಖದೀಮರು, ಕಾರಿನಿಂದ ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷಿನನ್ನು ಕತ್ತರಿಸಿ ಅದರದಲ್ಲಿದ್ದ 30 ಲಕ್ಷ ರೂ. ಹಣವನ್ನು ದೋಚಿದ್ದಾರೆ.

ಗುರುತು ಸಿಗಬಾರದೆಂಬ ಕಾರಣಕ್ಕೆ ಸಿಸಿ ಕ್ಯಾಮರಾಕ್ಕೆ ಸ್ಪ್ರೇ ಹೊಡೆದಿದ್ದಾರೆ. ಕಳವು ಮಾಡಿದ ನಂತರ ಹೊಸಕೋಟೆ ಮಾರ್ಗವಾಗಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ತನಿಖೆ ನಡೆಯುತ್ತಿವೆ.

See also  'ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ' ಅಗ್ನಿ ಶ್ರೀಧರ್ ಹೇಳಿಕೆಯನ್ನು ಖಂಡಿಸಿದ ನಟ ಚೇತನ್ ಕುಮಾರ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget