Latestಉಡುಪಿಸಿನಿಮಾ

ಉಡುಪಿ: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಕೈನಲ್ಲಿ ‘ಮೆಹಂದಿ ಚಿತ್ತಾರ’! ನಾಳೆ ಮದುವೆ, ಹುಡುಗ ಯಾರು ಗೊತ್ತಾ?ವಿಡಿಯೋ ವೀಕ್ಷಿಸಿ..

2.3k

ನ್ಯೂಸ್ ನಾಟೌಟ್:ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ದೊರಕಿದಂತಿದೆ. ಈ ಕುರಿತಂತೆ ಚೈತ್ರಾ ಕುಂದಾಪುರ ತಮ್ಮ ಇನ್ಸ್ಟಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಮೆಹಂದಿ ಶಾಸ್ತ್ರದ ವಿಡಿಯೋ ವೈರಲ್ ಆಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಇತ್ತೀಚೆಗೆ ವಿಭಿನ್ನವಾದ ಸಾರಿಯೊಂದಿಗೆ ಪೋಸ್ ಕೊಡುತ್ತಾ ಇನ್ಸ್ಟಾದಲ್ಲಿ ಅಪ್ ಲೋಡ್ ಮಾಡುತ್ತಲೇ ಇರುತ್ತಾರೆ. ಇದರ ಮಧ್ಯೆ ಈ ಒಂದು ವಿಡಿಯೋ ಭಾರಿ ಸದ್ದು ಮಾಡುತ್ತಿದೆ.ಆ ವಿಡಿಯೋದಲ್ಲಿ ಮದುವೆಯ ಮೆಹಂದಿ ಅಂತ ಪೋಸ್ಟ್ ಮಾಡಿದ್ದಾರೆ.ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಮೆಹಂದಿ ಕಾರ್ಯಕ್ರಮ ಜೋರಾಗಿ ನಡೆದಿದೆ. ಇದೇ ಮೇ 9ರಂದು ಚೈತ್ರಾ ಕುಂದಾಪುರ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ. ಶುಕ್ರವಾರ, ದೇವಸ್ಥಾನದಲ್ಲಿ ಸರಳವಾಗಿ ಮದುವೆ ನಡೆಯಲಿದೆ. ತಾವು ಪ್ರೀತಿಸಿದ ಹುಡುಗನ ಕೈ ಹಿಡಿಯಲಿದ್ದಾರೆ ಬಿಗ್ ಬಾಸ್ ಖ್ಯಾತಿಯ ಚೈತ್ರಾ.  

ತಮ್ಮ ಇನ್ಸ್ಟಾ ಖಾತೆಯಲ್ಲಿ ಚೈತ್ರಾ ಕುಂದಪುರ ಮೆಹಂದಿ ವಿಡಿಯೋ ಪೋಸ್ಟ್ ಮಾಡಿದ್ದು, ಇದಕ್ಕೆ ಅನೇಕರು ಶುಭಾಶಯ ಕೋರಿದ್ದಾರೆ. ಮದುವೆಯ ಮೆಹಂದಿ ಅಂತ ಅವರು ಶೀರ್ಷಿಕೆ ಹಾಕುತ್ತಾ ಸಾಲು ಸಾಲು ಪದಗಳನ್ನು ಬರೆದು ಶೇರ್ ಮಾಡಿದ್ದಾರೆ. “ತ್ರೇತಾಯುಗದಲ್ಲಿ ಶ್ರೀರಾಮ, ಲಕ್ಷ ಣ, ಭರತ ಮತ್ತು ಶತ್ರುಘ್ನರ ವಿವಾಹದ ಸಮಯದಲ್ಲಿ ಅವರನ್ನು ಸಿಂಗರಿಸಲು ಅವರ ಕೈ, ಕಾಲು, ಹಾಗೆಯೇ ಮುಖದ ಮೇಲೆ ಪಾಷಾಣಬಣ್ಣ (ವಿವಿಧ ಬಣ್ಣದ ಕಲ್ಲುಗಳಿಂದ ತಯಾರಿಸಿದ ಬಣ್ಣ) ಮತ್ತು ಪುಷ್ಪಬಣ್ಣ (ವಿವಿಧ ಬಣ್ಣದ ಹೂವುಗಳಿಂದ ತಯಾರಿಸಿದ ಬಣ್ಣ) ಗಳ ಸಹಾಯದಿಂದ ಎಲೆ-ಹೂವು ಮುಂತಾದ ಆಕಾರಗಳನ್ನು ಬಿಡಿಸಲಾಗಿತ್ತು. ಈ ಬಣ್ಣಗಳಲ್ಲಿ ವಿವಿಧ ದಿವ್ಯ ಔಷಧೀಯ ವನಸ್ಪತಿಗಳ ರಸಗಳನ್ನು ಬೆರೆಸಲಾಗಿತ್ತು. ಈ ಸುಗಂಧಿ ಮಿಶ್ರಣಕ್ಕೆ ‘ಪತ್ರಾವಲೀ’ ಎಂದು ಹೇಳುತ್ತಿದ್ದರು.ದ್ವಾಪರಯುಗದಲ್ಲಿಯೂ ಸಿಂಗಾರಕ್ಕಾಗಿ ‘ಪತ್ರಾವಲೀ’ಯನ್ನು ಉಪಯೋಗಿಸಲಾಗುತ್ತಿತ್ತು. ‘ತೋಕ’ ಎಂಬ ಹೆಸರಿನ ಶ್ರೀಕೃಷ್ಣನ ಮಿತ್ರನು ‘ಪತ್ರಾವಲೀ’ಯಿಂದ ಶ್ರೀಕೃಷ್ಣ ನನ್ನು ಸಿಂಗರಿಸುತ್ತಿದ್ದನು’ ಎಂದು ‘ಗರ್ಗಸಂಹಿತೆ’, ‘ಶ್ರೀಮದ್ಭಾಗವತ’, ‘ಶ್ರೀಕೃಷ್ಣಕರ್ಣಾಮೃತ’ ಮುಂತಾದ ಶ್ರೀಕೃಷ್ಣನ ಬಗೆಗಿನ ಪ್ರಮುಖ ಗ್ರಂಥಗಳಲ್ಲಿ ಉಲ್ಲೇಖಿಸಿರುವುದು ಕಂಡುಬರುತ್ತದೆ. ಆ ಸಮಯದಲ್ಲಿ ಶ್ರೀಕೃಷ್ಣನ ಗೋವುಗಳನ್ನೂ ‘ಪತ್ರಾವಲಿ’ಯಿಂದ ಸಿಂಗರಿಸಲಾಗುತ್ತಿತ್ತು.ಮದರಂಗಿ ಕೇವಲ ಬಣ್ಣವಲ್ಲ ಅದು ಸಂಸ್ಕೃತಿಯ ಕೈಗನ್ನಡಿ” ಎಂದು ದೊಡ್ಡ ಶೀರ್ಷಿಕೆಯನ್ನು ಹಾಕಿರುವ ಚೈತ್ರಾ, ಮೆಹಂದಿ ಮಹತ್ವವನ್ನು ಹೇಳಿದ್ದಾರೆ. 

ಚೈತ್ರಾರ ಈ ವಿಡಿಯೋ ನೋಡಿ ಅವರ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ಧಾರೆ. ಕೆಲ ಸಮಯದ ಹಿಂದಷ್ಟೆ ಈ ವಿಡಿಯೋ ಹಂಚಿಕೊಂಡಿದ್ದು, ಅವರ ಕೈ ಮೇಲೆ ಸುಂದರ ಮೆಹಂದಿ ಚಿತ್ತಾರವನ್ನು ಕೂಡ ನೀವು ಕಾಣ್ಬುಹುದು. ಸುಂದರವಾಗಿ ರೆಡಿಯಾಗಿರುವ ಚೈತ್ರಾ, ಮೆಹಂದಿ ತೋರಿಸ್ತಾ, ಫೋಟೋ, ವಿಡಿಯೋಕ್ಕೆ ಫೋಸ್ ನೀಡಿದ್ದಾರೆ. ಇದಕ್ಕೂ ಮುನ್ನ ಬ್ರೈಡ್ ಟು ಬಿ ಹೆಸರಿನಲ್ಲಿ ಚೈತ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವಧುವಿನಂತೆ ಸಿಂಗಾರಗೊಂಡಿರುವ ಚೈತ್ರಾ ತಲೆ ಮೇಲೆ ಅಕ್ಷತೆ ಕಾಳುಗಳು ಬೀಳ್ತಿವೆ. ಚೈತ್ರಾ ಬಿಗ್ ಬಾಸ್ ಮನೆಯಿಂದ ಬಂದ್ಮೇಲೆ ಬಾಯ್ಸ್ ವರ್ಸಸ್ ಗರ್ಲ್ಸ್ ಶೋನಲ್ಲಿ ಪಾಲ್ಗೊಂಡಿದ್ದರು. ಚೈತ್ರಾ ಮಂಗಳಪತ್ರ ಹಿಡಿದು ಬಂದಿದ್ದ ವಿಡಿಯೋ ವೈರಲ್ ಆಗಿತ್ತು.

See also  ರಜನಿಕಾಂತ್ ನಟನೆಯ ‘ಜೈಲರ್ 2’ ಚಿತ್ರದಲ್ಲಿ ಶಾರುಖ್ ಖಾನ್ ನಟನೆ..? ನಟ ಶಿವರಾಜ್‌ ಕುಮಾರ್‌ ಗೂ ಪ್ರಮುಖ ಪಾತ್ರ..!

ಇನ್ನು ಕೆ ಟಿವಿ ಶೋದಲ್ಲಿಯೂ ಕಾಣಿಸಿಕೊಂಡ ಚೈತ್ರಾ ಹಿಂದಿನ ವಾರ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಸೃಜನ್ ಲೋಕೇಶ್, ಚೈತ್ರಾ ಮದುವೆ ಆಗ್ತಿರೋದನ್ನು ದೃಢಪಡಿಸಿದ್ದರು. ಚೈತ್ರಾಗೆ ಶುಭ ಕೋರಿದ್ದ ಸೃಜನ್ ಲೋಕೇಶ್ ಹುಡುಗನ ಬಗ್ಗೆ ಒಂದಿಷ್ಟು ಮಾಹಿತಿಯನ್ನೂ ಪಡೆದಿದ್ದರು. ಚೈತ್ರಾ ಲವ್ ಕಮ್ ಅರೇಂಜ್ಡ್ ಮ್ಯಾರೇಜ್ ಮಾಡಿಕೊಳ್ತಿದ್ದಾರೆ ಅನ್ನೋದು ಬಿಟ್ರೆ ಹೆಚ್ಚಿನ ವಿಷ್ಯ ಈವರೆಗೂ ಹೊರಗೆ ಬಿದ್ದಿಲ್ಲ. ಚೈತ್ರಾ ಯಾರ ಕೈ ಹಿಡಿಯುತ್ತಿದ್ದಾರೆ ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಹನ್ನೆರಡು ವರ್ಷಗಳಿಂದ ಪ್ರೀತಿಯಲ್ಲಿದ್ದ ಚೈತ್ರಾ ಈಗ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ ಅನ್ನೋ ವಿಚಾರವಷ್ಟೇ ಗೊತ್ತಾಗಿದೆ.

 

  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget