ಕರಾವಳಿಕ್ರೈಂವೈರಲ್ ನ್ಯೂಸ್

ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್..! ವಾಶ್​ ರೂಮ್ ಪರಿಶೀಲನೆ ಮಾಡಿದ ಪೊಲೀಸರಿಗೆ ಕಾದಿತ್ತು ಶಾಕ್!

88
Spread the love

ನ್ಯೂಸ್ ನಾಟೌಟ್ : ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ಅನಾರೋಗ್ಯದ ನಾಟಕವಾಡಿದ್ದಾರೆ ಎನ್ನಲಾದ ಚೈತ್ರ ಕುಂದಾಪುರ ಆಸ್ಪತ್ರೆಯಿಂದ ಇಂದು(ಸೋಮವಾರ) ಡಿಸ್ಚಾರ್ಜ್ ಮಾಡಲಾಗಿದೆ.ರೋಗಿಯಂತೆ ಕಳೆದ 3 ದಿನಗಳಿಂದ ನಾಟಕವಾಡುತ್ತಾ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈಗ ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾಳೆ.

ಎಲ್ಲಾ ಮೆಡಿಕಲ್​ ರಿಪೋರ್ಟ್​ಗಳಲ್ಲಿ ನಾರ್ಮಲ್​ ಎಂದು ಬಂದಿದೆ. ಹೀಗಾಗಿ ಇಂದು(ಸೆಪ್ಟೆಂಬರ್ 18) ಸಿಸಿಬಿ ಪೊಲೀಸರು (CCB Police), ಚೈತ್ರಾ ಕುಂದಾಪುರಳನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಇನ್ನು ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ದಿವ್ಯಪ್ರಕಾಶ್ ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರಗೆ ಫಿಟ್ಸ್​ ಏನು ಕಂಡು ಬಂದಿಲ್ಲ. ಮೊದಲ ಬಾರಿ ಇಸಿಜಿ ಮಾಡಿದಾಗ ಸ್ವಲ್ಪ ವ್ಯತ್ಯಾಸ ಕಂಡುಬಂದಿತ್ತು.

24 ಗಂಟೆ ಬಳಿಕ ಇಸಿಜಿ ಮಾಡಿದಾಗ ವ್ಯತ್ಯಾಸ ಕಂಡು ಬಂದಿಲ್ಲ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯವು ನಾರ್ಮಲ್​ ಇದೆ. ಫಿಟ್ಸ್​ ಪತ್ತೆ ಮಾಡುವುದಕ್ಕೆ ಎಂಆರ್​ಐ ಹಾಗೂ ಇಇಜಿ ಸ್ಕ್ಯಾನಿಂಗ್ ಮಾಡಿದ್ದು, ಫಿಟ್ಸ್​​ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡ ಕಾರಣ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಆಕೆಯ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮ ಕೇರ್ ಸೆಂಟರ್​​ನ ವಿಶೇಷ ಅಧಿಕಾರಿ ಡಾಕ್ಟರ್ ಬಾಲಾಜಿ ಪೈ ಮಾಹಿತಿ ನೀಡಿದ್ದು, ಚೈತ್ರಾ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಪ್ರಜ್ಞಾಹೀನಳಾಗಿದ್ದಳು.

ವೈದ್ಯರು ಸಹ ಎಲ್ಲಾ ಪರೀಕ್ಷೆ ಮಾಡಿ ಚೈತ್ರಾಳಿಗೆ ಫಿಡ್ಸ್ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್​ ರೂಮ್ ಅನ್ನು ಪೊಲೀಸರು ಪರಿಶೀಲನೆ ಮಾಡಿದ್ದರು ಅನುಮಾನ ದೃಢಪಟ್ಟಿದೆ ಆದರೆ ಅಧಿಕೃತವಾಗಿ ಇನ್ನೂ ಹೇಳಿಕೆ ನೀಡಿಲ್ಲ ಎನ್ನಲಾಗಿದೆ.

See also  ಅಸಹ್ಯಕರ ತುಂಡುಡುಗೆ ತೊಟ್ಟು ಅರೆಬರೆ ಬಟ್ಟೆಯ ಬಗ್ಗೆಯೇ ಪ್ರಶ್ನೆ ಮಾಡುತ್ತಾ ಬೀದಿ ಸುತ್ತಿದ ಯುವತಿ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget