ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

Challenging Star Darshan arrested: ದರ್ಶನ್ ಅರೆಸ್ಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

153

ನ್ಯೂಸ್ ನಾಟೌಟ್: ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾದ ಕೇಸ್‌ ನ ವಿಚಾರವಾಗಿ ಮೈಸೂರಿನಲ್ಲಿ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಈ ಕೇಸ್‌ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. “ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್‌ ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಕೇಳಿ ಬಂದಿದೆ ಎಂಬ ಮಾಹಿತಿ ಇದೆ.

ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಏನು ಹೇಳೋಕೆ ಆಗಲ್ಲ” ಎಂದು ಪರಮೇಶ್ವರ್ ಮಾತನಾಡಿದ್ದಾರೆ. “ಈ ಕೇಸ್‌ ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿಯನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/challenging-star-darshan-arrested-in-process
https://newsnotout.com/2024/06/bike-father-sister-and-son-conflict-kannada-news
https://newsnotout.com/2024/06/kannada-news-hd-devegowda-and-narendra-modi-call
See also  ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿ ಆರೋಪಿಗಳು ಪರಾರಿ..! ಮಹಿಳೆಯ ವಿರುದ್ಧವೇ ದೂರು ನೀಡಿದ ಬ್ಯಾಂಕ್ ನಿರ್ದೇಶಕರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget