Latestಕ್ರೀಡೆಕ್ರೈಂವೈರಲ್ ನ್ಯೂಸ್

ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ಪೊಲೀಸರ ಮೇಲೆಯೇ ದಾಳಿ..! ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪೊಲೀಸರು..!

600

ನ್ಯೂಸ್ ನಾಟೌಟ್: ಭಾರತ ಕ್ರಿಕೆಟ್ ತಂಡ ಭಾನುವಾರ(ಮಾ.9) ರಾತ್ರಿ ದುಬೈನಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಸಂಭ್ರಮವನ್ನು ಆಚರಿಸಿದ ಯುವಕರ ತಂಡವು ಮದ್ಯಪ್ರವೇಶಿಸಿದ ಪೊಲೀಸರ ಮೇಲೆಯೇ ದಾಳಿ ಮಾಡಿತ್ತು. ಕೆಲವರು ಪೊಲೀಸ್ ವಾಹನಗಳನ್ನು ಬೆನ್ನಟ್ಟಿಕೊಂಡು ಹೋಗಿ ಕಲ್ಲು ತೂರಾಟ ನಡೆಸುತ್ತಿರುವುದೂ ಕಂಡುಬಂದಿದೆ. ಈ ಘಟನೆ ಹಿಂಸಾತ್ಮಕ ರೂಪ ಪಡೆದ ಆರೋಪದಲ್ಲಿ ಇಬ್ಬರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಎನ್ ಎಸ್ ಎ ಅಡಿಯಲ್ಲಿ ಆರೋಪಿಗಳನ್ನು 12 ತಿಂಗಳ ವರೆಗೆ ಬಂಧನದಲ್ಲಿಡಲು ಅವಕಾಶವಿದೆ.

ಈ ಆರೋಪಿಗಳ ಯುವಕರ ತಲೆ ಬೋಳಿಸಿ ಅವರನ್ನು ಪೊಲೀಸರು ಮೆರವಣಿಗೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸ್ ಬೆಂಗಾವಲಿನಲ್ಲಿ ಯುವಕರನ್ನು ಕರೆದೊಯ್ಯುತ್ತಿರುವ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. ಈ ವಿವಾದದ ಬೆನ್ನಲ್ಲೇ ಬಿಜೆಪಿ ಶಾಸಕಿ ಗಾಯತ್ರಿ ರಾಜೇ ಪವಾರ್ ದೇವಾಸ್ ಎಸ್ಪಿ ಪುನೀತ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸುಮಲತಾ ಅಂಬರೀಶ್ ಅನ್ನು ಅನ್‌ ಫಾಲೋ ಮಾಡಿದ ನಟ ದರ್ಶನ್..! ಕುತೂಹಲ ಮೂಡಿಸಿದ ಸುಮಲತಾ ಪೋಸ್ಟ್..!

“ದೇಶದ ಇತರೆಡೆ ಸಂಭ್ರಮಿಸಿದಂತೆ ಈ ಯುವಕರು ಕೂಡಾ ಭಾರತದ ಗೆಲುವನ್ನು ಸಂಭ್ರಮಿಸಿದ್ದರು. ಇವರು ಅಪರಾಧಿಗಳಲ್ಲ; ಅವರನ್ನು ಸಾರ್ವಜನಿಕವಾಗಿ ಮೆರವಣಿಗೆ ನಡೆಸಿರುವುದು ನ್ಯಾಯಸಮ್ಮತವಲ್ಲ. ಅವರ ಕುಟುಂಬದ ಸದಸ್ಯರು ಎಸ್ಪಿ ಕಚೇರಿಗೆ ನನ್ನ ಜತೆಗೆ ಬಂದಿದ್ದು, ಈ ಅಸಮಂಜಸ ಶಿಕ್ಷೆಯನ್ನು ನಾವು ಬಲವಾಗಿ ಖಂಡಿಸಿದ್ದೇವೆ. ಘಟನೆ ಬಗ್ಗೆ ಸಮಗ್ರ ತನಿಖೆಯ ಭರವಸೆಯನ್ನು ಎಸ್ಪಿ ನೀಡಿದ್ದಾರೆ” ಎಂದು ಶಾಸಕಿ ವಿವರಿಸಿದ್ದಾರೆ. ರವಿವಾರ ರಾತ್ರಿಯ ಸಂಭ್ರಮಾಚರಣೆ ಮತ್ತು ಸೋಮವಾರದ ಘಟನಾವಳಿಗಳ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.

See also  ದರ್ಶನ್ ಮತ್ತು ಪವಿತ್ರಾಗೌಡ ಪರ ವಕೀಲರು ಧರ್ಮಸ್ಥಳಕ್ಕೆ ಭೇಟಿ..! ಕುತೂಹಲ ಕೆರಳಿಸಿದ ವಕೀಲರ ನಡೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget