ಕರಾವಳಿ

ಆರಿಕೋಡಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜನಜಾತ್ರೆ

372

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ನವರಾತ್ರಿ ಪೂಜೆಯ ಹಿನ್ನೆಲೆಯಲ್ಲಿ ಮಂಗಳವಾರ ಭಕ್ತಜನಸಾಗರ ನೆರೆದು ದೇವಿಯ ದರ್ಶನ ಪಡೆದುಕೊಂಡರು.

ನಾಗತಂಬಿಲ, ಮಹಾಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮ ನೆರವೇರಿತು. ಇದೇ ವೇಳೆ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಪೆನ್‌ ಮತ್ತು ಬಳಪ ವಿತರಣೆ ಮಾಡಲಾಯಿತು. ಮಹಿಳೆಯರಿಗೆ ರವಿಕೆ ಕಣ ಮತ್ತು ಬಳೆ ವಿತರಣೆ, ವಾಹನ ಪೂಜೆ ನೆರವೇರಿತು. ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ದೇವಸ್ಥಾನಕ್ಕೆ ಬಂದಿದ್ದು ವಿಶೇಷವಾಗಿತ್ತು. ಇದೇ ವೇಳೆ ಅನ್ನಸಂತರ್ಪಣೆ ಕೂಡ ನಡೆಯಿತು.

See also  ಸಿಎಂ ಕಾರ್ಯಕ್ರಮ ಹಿನ್ನೆಲೆ, ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟ ಮುಂದೂಡಿಕೆ, ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ ನೋಡಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget