ಕ್ರೈಂವೈರಲ್ ನ್ಯೂಸ್

ಚಂದ್ರಯಾನದ ಬಗ್ಗೆ ವ್ಯಂಗ್ಯ: ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿ ಎಂದು ತನ್ನ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದ ನಟ ಪ್ರಕಾಶ್ ರಾಜ್! ನಟನ ವಿರುದ್ಧ ಹಿಂದೂ ಮುಖಂಡನಿಂದ ದಾಖಲಿಸಲಾದ ದೂರಿನಲ್ಲೇನಿದೆ?

ನ್ಯೂಸ್ ನಾಟೌಟ್: ಚಂದ್ರಯಾನ 3 (Chandrayaan 3) ಯೋಜನೆ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್ ಭಾರೀ ವೈರಲ್ ಆಗಿತ್ತು. ಅನೇಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ನಿನ್ನೆ(ಆ.೨೧) ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಇಂದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಚಂದ್ರಯಾನ 3ರ ಬಗ್ಗೆ ಇಡೀ ಭಾರತವೇ ಹೆಮ್ಮೆ ಪಡುತ್ತಿರುವಾಗ ಪ್ರಕಾಶ್ ರಾಜ್ ಈ ರೀತಿ ವ್ಯಂಗ್ಯ ಮಾಡುವುದು ಸರಿಯಲ್ಲ ಎಂದು ಹಲವರು ಬುದ್ದಿವಾದ ಹೇಳಿದ್ದರು. ವಿರೋಧಗಳು ಹೆಚ್ಚಾದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದ ಪ್ರಕಾಶ್ ರಾಜ್. ಹಾಸ್ಯ ಪ್ರಜ್ಞೆ ಇಲ್ಲದವರು ಹೀಗೆಲ್ಲ ಮಾಡುತ್ತಾರೆ ಎಂದು ವಿರೋಧಿಸಿದವರನ್ನು ಟೀಕಿಸಿ ತಮ್ಮ ಟ್ವೀಟ್ ಸಮರ್ಥಿಸಿಕೊಂಡಿದ್ದರು.

ಈ ಬೆಳವಣಿಗೆಯ ನಡುವೆಯೇ ಚಂದ್ರಯಾನ ಮತ್ತು ಭಾರತೀಯ ವಿಜ್ಞಾನಿಗಳನ್ನು ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಾಗಿದೆ.

ಹಿಂದೂ ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರು ಸೇರಿ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ನಮ್ಮ ಹೆಮ್ಮೆಯ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಫೋಸ್ಟ್ ಮಾಡಿ ಪ್ರಕಾಶ್ ರಾಜ್ ತಮ್ಮ ವಿಕೃತಿ ಮೆರೆದಿದ್ದಾರೆ. ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್‌ ಮತ್ತೊಂದು ಟ್ವೀಟ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದರು. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‍ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

Related posts

ಅವಾಚ್ಯ ಶಬ್ದಗಳಿಂದ ಬಯ್ಯುತ್ತಿರುವ ಲಕ್ಮಣ, ಸಿಗರೇಟು ಸೇದುವ ಸೀತಾ ದೇವಿ..! ಏನಿದು ವಿಪರ್ಯಾಸ…? ಪ್ರೊಫೆಸರ್ ಸೇರಿ 5 ವಿದ್ಯಾರ್ಥಿಗಳ ಬಂಧನ

ಕೈಕಾಲು ಕಟ್ಟಿದ ರೀತಿಯಲ್ಲಿ ಮಹಿಳೆಯ ಕೊಳೆತ ಶವ ಪತ್ತೆ..! ಆಕೆಯ ಕಿವಿಯೋಲೆ ಬಿಚ್ಚಿಟ್ಟ ಭಯಾನಕ ಸ್ಟೋರಿ ಇಲ್ಲಿದೆ

ಬೆಳ್ತಂಗಡಿ : ರಸ್ತೆ ಬದಿ ಐದು ಗ್ರನೇಡ್ ಪತ್ತೆ, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು..!