ಕರಾವಳಿಪುತ್ತೂರು

ಪುತ್ತೂರು: ಭಾರಿ ಮಳೆಗೆ ಮುಳುಗಡೆಯಾದ ಚೆಲ್ಯಡ್ಕ ಸೇತುವೆ, ಪ್ರತಿ ವರ್ಷ ಮುಳುಗಡೆಯಾದರೂ ಪರ್ಯಾಯ ಕ್ರಮ ಕೈಗೊಳ್ಳದ ಇಲಾಖೆ !

259

ನ್ಯೂಸ್‌ ನಾಟೌಟ್‌: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಗೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಗುರುವಾರ (ಜು.6ರಂದು) ಮುಂಜಾನೆ ಮುಳುಗಡೆಯಾಗಿದೆ.

ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆ ಪ್ರತಿ ವರ್ಷ ಮುಳುಗಡೆಯಾಗುತ್ತಿದ್ದು, ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸುತ್ತು ಬಳಸಿ ಸಂಚರಿಸಬೇಕಾಗಿದೆ. ಈ ಬಾರಿ ಸುರಿದ ಮಳೆಗೆ ಚೆಲ್ಯಡ್ಕ ಸೇತುವೆ ಮೊದಲ ಬಾರಿಗೆ ಮುಳುಗಡೆಯಾಗಿದೆ.

ಈ ಸೇತುವೆ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಆ ಭಾಗದ ಜನ ಪರ್ಯಾಯ ರಸ್ತೆ ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

See also  Shirur landslide| ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..! ಲಾರಿಯ ಅವಶೇಷಗಳ ಜೊತೆಗೆ ದೊರೆತ 2 ಮೃತದೇಹಗಳು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget