ಶಿಕ್ಷಣಸುಳ್ಯ

ಸುಳ್ಯ: ಡಾ. ಕೆ.ವಿ ಚಿದಾನಂದ ಮತ್ತು ಮನೆಯವರಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಗೆ ಶ್ರೀಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಹ್ವಾನ, ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದುಕೊಂಡ ಕುರುಂಜಿ ಕುಟುಂಬ

150

ನ್ಯೂಸ್ ನಾಟೌಟ್: ಸುಳ್ಯದ ಇತಿಹಾಸ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ  ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಹಾಗೂ ಹಾಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಬುಧವಾರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾಗಿರುವ ಡಾ. ಕೆ.ವಿ. ಚಿದಾನಂದ, ಎಒಎಲ್ಇ ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಚೆನ್ನಕೇಶವ ಅನುವಂಶಿಕ ಆಡಳಿತ ಮೊಕ್ತೇಸರ ಡಾ ಹರಪ್ರಸಾದ್ ತುದಿಯಡ್ಕ ಸೇರಿದಂತೆ ಗಣ್ಯರು ಹಾಜರಿದ್ದರು. ಡಿ.25ರಂದು ಬ್ರಹ್ಮರಥ ಸುಳ್ಯಕ್ಕೆ ಆಗಮಿಸಲಿದೆ. 

See also  ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ಳಾರೆ ಜ್ಞಾನದೀಪ ಸಂಸ್ಥೆಗೆ ಶೇ.80 ರಿಸಲ್ಟ್, ಇಬ್ಬರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget