ಕ್ರೈಂಚಿಕ್ಕಮಗಳೂರು

ಕಾಫಿನಾಡಲ್ಲಿ ಭೀಕರ ಸರಣಿ ಅಪಘಾತ ! ದಂಪತಿ ದುರಂತ ಅಂತ್ಯ, 1 ವರ್ಷದ ಮಗು ಅನಾಥ!

193

ನ್ಯೂಸ್ ನಾಟೌಟ್ : ಕಾಫಿನಾಡಲ್ಲಿ ಭೀಕರ ಸರಣಿ ಅಪಘಾತ ನಡೆದಿದ್ದು, ಕಾರು, ಟಿಪ್ಪರ್, ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಘಟನೆ ನಡೆದಿದ್ದು, ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ದುರಂತ ಅಂತ್ಯ ಕಂಡ ದುರ್ದೈವಿಗಳು ಎನ್ನಲಾಗಿದೆ.

ಬೈಕಿನಲ್ಲಿದ 1 ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು, ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದಂಪತಿ ಹಿರೇಗೌಜ ಗ್ರಾಮದಲ್ಲಿ ಕಳೆದ ರಾತ್ರಿ ಅಪಘಾತ ಸಂಭವಿಸಿದೆ.

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

See also  ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ..! ವೃದ್ಧನ ವಿಡಿಯೋ ಎಲ್ಲೆಡೆ ವೈರಲ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget