ಬೆಂಗಳೂರುರಾಜಕೀಯ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ಗೆ ಮಾತೃ ವಿಯೋಗ

ನ್ಯೂಸ್‌ ನಾಟೌಟ್‌:  ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್​ ವಿರುದ್ಧ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಇಂದು ಮಾತೃವಿಯೋಗ ಆಗಿದೆ.

ಪ್ರದೀಪ್​ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಕೊನೆಯುಸಿರೆಳೆದಿದ್ದಾರೆ. ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್​ ಈಶ್ವರ್ ಸಾಕು ತಾಯಿ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ವಾಪಸ್​ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ.

ಪ್ರದೀಪ್​ ಈಶ್ವರ್​ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಚನೆಯಾಗದಿದ್ದರೂ ಕ್ಷೇತ್ರದಲ್ಲಿ ಜನರ ಜತೆ ನಿಕಟ ಸಂಪರ್ಕ ಬೆಳೆಸುತ್ತಿದ್ದಾರೆ. ಮನೆಗೆ ಮನೆಗಳಿಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರ ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆ ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ಪ್ರದೀಪ್​ ಈಶ್ವರ್​ ಅವರು ಮನೆ ಮನೆಗೆ ತೆರಳಿ ಜನರೊಂದಿಗೆ ಮಾತನಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

Related posts

ವಿಟ್ಲ: ಇವಿಎಂ ನಲ್ಲಿ ತಾಂತ್ರಿಕ ದೋಷ..! ಮತದಾನಕ್ಕೆ ಬಂದವರು ಗಂಟೆಗಟ್ಟಲೇ ಸಾಲಿನಲ್ಲಿಯೇ ನಿಂತು ಸುಸ್ತು

ಸುಳ್ಯ:ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರರ ಆರೋಗ್ಯದಲ್ಲಿ ಚೇತರಿಕೆ,ಶಸ್ತ್ರ ಚಿಕಿತ್ಸೆ ಯಶಸ್ವಿ

ಸಿಎಂ ಗೃಹ ಕಚೇರಿಯಲ್ಲೂ ನೀರಿಲ್ಲ..! ಟ್ಯಾಂಕರ್‌ ಮೂಲಕ ನೀರು ಪೂರೈಸಿದ ಜಲಮಂಡಳಿ