Latestಚಿಕ್ಕಮಗಳೂರು

ಪಹಲ್ಗಾಂ ದಾಳಿ, ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್: ಹಿಂದೂ ಮುಖಂಡರು ಪೊಲೀಸ್ ವಶಕ್ಕೆ

304

ನ್ಯೂಸ್ ನಾಟೌಟ್: ಪಹಲ್ಗಾಮ್ ಉಗ್ರರ ದಾಳಿ ಹಾಗೂ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರು ಚಿಕ್ಕಮಗಳೂರು ಬಂದ್ ಕರೆ ನೀಡಿದ್ದರು. ಹೀಗಾಗಿ ಇಂದು ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ.

ಎಂ.ಜಿ.ರಸ್ತೆ, ಮಾರ್ಕೆಟ್ ರಸ್ತೆ, ಐ.ಜಿ.ರಸ್ತೆಗಳಲ್ಲಿ 10 ಗಂಟೆ ಬಳಿಕವೂ ಅಂಗಡಿಗಳನ್ನು ತೆರೆಯದೆ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಡಾವಣೆಗಳಲ್ಲಿ ಅಂಗಡಿಗಳು ತೆರೆದಿವೆ. ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್.ಪುರದಲ್ಲಿ ಅಂಗಡಿಗಳು ಬಂದ್ ಆದ್ದು,ಬಸ್, ಆಟೊರಿಕ್ಷಾ ಸೇರಿ ವಾಹನ ಸಂಚಾರ ಎಲ್ಲೆಡೆ ಸಹಜ ಸ್ಥಿತಿಯಲ್ಲಿರುವುದು ಕಂಡು ಬಂದಿತ್ತು.

ಇತ್ತ ಸರ್ಕಾರಿ ಕಚೇರಿಗಳು, ಕಾಲೇಜುಗಳು ಎಂದಿನಂತೆ ತೆರೆದಿರುವುದರ ಬಗ್ಗೆ ವರದಿಯಾಗಿವೆ.ಕಡೂರು, ಅಜ್ಜಂಪುರ, ತರೀಕೆರೆಯಲ್ಲಿ ಬಂದ್ ಗೆ ಬೆಂಬಲ ದೊರೆತಿಲ್ಲ. ಅಂಗಡಿಗಳು ಎಂದಿನಂತೆ ತೆರೆದಿವೆ. ಬಲವಂತದಿಂದ ಬಂದ್ ನಡೆಸಲು ಮುಂದಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

See also  ಕಲ್ಲುಗುಂಡಿ :ಒತ್ತೆಕೋಲ ಗದ್ದೆಯಲ್ಲಿರುವ ರಂಗಮಂಟಪದಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ: ಸಾವಿರಾರು ಸಂಖ್ಯೆಯಲ್ಲಿ ಊರ ಹಾಗೂ ಪರವೂರ ಯಕ್ಷಾಭಿಮಾನಿಗಳು ಭಾಗಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget