ಕರಾವಳಿಚಿಕ್ಕಮಗಳೂರು

ಕೆಎಸ್‌ಆರ್‌ಟಿಸಿ ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ..!,ಆಸ್ಪತ್ರೆಗೆ ತಲುಪುವ ಮುನ್ನವೇ ಕೊನೆಯುಸಿರೆಳೆದ ಚಾಲಕ..

161

ನ್ಯೂಸ್ ನಾಟೌಟ್ : ಕೆಎಸ್‌ಆರ್‌ಟಿಸಿ ಬಸ್‌ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ (Heart Attack) ಕರ್ತವ್ಯನಿರತ ಚಾಲಕ (Ksrtc Bus Driver) ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಿಂದ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಹೆಸಗೊಡ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕ ರವಿ ಲಮಾಣಿ (46) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಬಸ್‌ ಚಾಲಕ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಮೂಡಿಗೆರೆ, ಗುತ್ತಿಹಳ್ಳಿ, ಹೆಸ್ಗೋಡ್ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ದಾರಿ ಮಧ್ಯೆ ಈ ಘಟನೆ ನಡೆದಿದೆ. ಬಸ್ ಚಾಲನೆ ಮಾಡುವಾಗಲೇ ಚಾಲಕ ರವಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ಒಂದು ಕೈಯಲ್ಲಿ ಸ್ಟೇರಿಂಗ್‌ ಹಿಡಿದು ಮತ್ತೊಂದು ಕೈಯಲ್ಲಿ ಎದೆಗೆ ಸವರಿಕೊಂಡು ಕೂಗಳತೆ ದೂರದವರೆಗೆ ಬಸ್‌ ಚಲಾಯಿಸಿದ್ದಾರೆ ಎನ್ನಲಾಗಿದೆ. ಆದರೆ ನೋವು ಸಹಿಸಲು ಆಗದೇ ಕೂಡಲೇ ರಸ್ತೆ ಮಧ್ಯೆಯೇ ಬ್ರೇಕ್‌ ಹಾಕಿ ಬಸ್ ನಿಲ್ಲಿಸಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಬಸ್‌ ನಿರ್ವಾಹಕ ಪ್ರಯಾಣಿಕರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ದಾರಿ ಮಧ್ಯೆಯೇ ರವಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕ ರವಿ ಕೊಪ್ಪಳದ ಕೂಕ್ನೂರ್ ಗ್ರಾಮದವರಾಗಿದ್ದು, ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ರಾಮ ದಶರಥ ಮಹಾರಾಜನಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು..! ಮತ್ತೆ ನಾಲಗೆ ಹರಿಬಿಟ್ಟ ಪ್ರೊ.ಭಗವಾನ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget