ದೇಶ-ಪ್ರಪಂಚ

ಭದ್ರಾ ನದಿಯಲ್ಲಿ ಕುರಿ-ಮೇಕೆಗಳ ಶವ ಪತ್ತೆ..! ಬೆಚ್ಚಿ ಬಿದ್ದ ಜನತೆ, ವಾಮಾಚಾರದ ಶಂಕೆ..

ನ್ಯೂಸ್‌ ನಾಟೌಟ್‌ : ಬೃಹತ್ ವಾಮಾಚಾರ ನಡೆದಿದೆ ಎನ್ನಲಾದ ಘಟನೆಯೊಂದು ಕಾಫಿನಾಡಿನ ಭದ್ರಾ ನದಿ ಬಳಿ ನಡೆದಿದೆ.ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳನ್ನು ಬಲಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ-ಮೇಕೆಗಳ ಶವ ಕೂಡಾ ಪತ್ತೆಯಾಗಿದೆ.

ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪತ್ನಿ ಆಡಿದ ಮಾತನ್ನು ನೆನೆದು ಕಣ್ಣೀರಿಟ್ಟ ನಿರ್ಮಾಪಕ ರವೀಂದರ್​ ಚಂದ್ರಶೇಖರ್! ,ಕಾರಣವೇನು?

ಚುನಾವಣೆ ಗೆಲ್ಲಲು ಫಕೀರ್​​ನಿಂದ ಚಪ್ಪಲಿ ಆಶೀರ್ವಾದ ಪಡೆದ ಕಾಂಗ್ರೆಸ್​​ ಅಭ್ಯರ್ಥಿ..!ಏನಿದು ಚಪ್ಪಲಿ ಆಶೀರ್ವಾದ?ಯಾರಿದು ಫಕೀರ್?

ಮದುವೆಗೆ 4 ದಿನ ಇರುವಾಗ ಪೊಲೀಸರೆದುರೇ ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ತಂದೆ..! ಇಲ್ಲಿದೆ ಸಿನಿಮೀಯ ಘಟನೆ..!