ಚಿಕ್ಕಮಗಳೂರು

ಕೇವಲ 750ರೂ. ಸಾಲ ಹಿಂದಿರುಗಿಸಲಾಗದೇ ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಮಾಜಿ ಯೋಧನ ಮಗ , ಜೀವನವನ್ನೇ ಕತ್ತಲಾಗಿಸಿ ಕೊಂಡ ಘಟನೆಗೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

163

ನ್ಯೂಸ್ ನಾಟೌಟ್ : ಇತ್ತೀಚಿಗಷ್ಟೇ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಖಾಸಗಿ ಶಾಲಾ ವಿದ್ಯಾರ್ಥಿ ತನ್ನ ಜೀವನವನ್ನೇ ಕತ್ತಲನ್ನಾಗಿಸಿಕೊಂಡ ಘಟನೆ ವರದಿಯಾಗಿತ್ತು. ಶ್ರೀನಿವಾಸ್ ಎಂಬ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ಬೆಳಗ್ಗಿನ ಜಾವ ತನ್ನ ಕುತ್ತಿಗೆಗೆ ಸೀರೆ ಬಿಗಿದುಕೊಂಡಿದ್ದ. 9ನೇ ತರಗತಿ ವಿದ್ಯಾರ್ಥಿಯ ಈ ಕೃತ್ಯಕ್ಕೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು.

ಇದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ ಸ್ಪೋಟಕ ವಿಷಯವೊಂದು ಬೆಳಕಿಗೆ ಬಂದಿದೆ. ಕೇವಲ 750 ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದಿದ್ದುದಕ್ಕೆ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಕಡೂರು ತಾಲೂಕಿನ ಹಿರೇ ಬಳ್ಳಕೆರೆ ಗ್ರಾಮದ ಶ್ರೀನಿವಾಸ್ ಕೊಪ್ಪ ತಾಲೂಕಿನ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿದ್ಯಾರ್ಥಿ ಈ ಕೃತ್ಯ ನಡೆಸುವುದಕ್ಕೂ ಮುನ್ನ ಬರೆದಿಟ್ಟಿದ್ದ ಚೀಟಿ ಪರಿಶೀಲಿಸಿದ್ದಾರೆ.

ವಿದ್ಯಾರ್ಥಿ ಸ್ನೇಹಿತರಿಂದ ಪಡೆದಿದ್ದ 750 ರೂ. ಸಾಲವನ್ನು ನೀಡಲು ಸಾಧ್ಯವಾಗದ ಹಿನ್ನೆಲೆ ಮನನೊಂದ್ದಿದ್ದೇನೆ ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ಶ್ರೀನಿವಾಸ್ ಮಾಜಿ ಯೋಧನ ಮಗನಾಗಿದ್ದು, ಮಗನನ್ನು ಕಳೆದು ಕೊಂಡ ತಂದೆ ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದಾರೆ.

See also  ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ..! ಕಳೆದ ವರ್ಷ 132 ಜನರಿಗೆ ಬಾಧಿಸಿದ್ದ ಖಾಯಿಲೆ 4 ಜನರನ್ನು ಬಲಿ ಪಡೆದಿತ್ತು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget