Latest

ಸ್ಕೂಟಿಗೆ ಗುದ್ದಿ ಜೀಪ್ ನಿಲ್ಲಿಸದೇ ಎಸ್ಕೇಪ್‌ ಆದ ಪೊಲೀಸರು!ಸ್ಕೂಟಿ ಸವಾರ ಮೃತ್ಯು,ರಕ್ಷಕರಿಂದಲೇ ರಾಕ್ಷಸ ವರ್ತನೆ!

3k

ನ್ಯೂಸ್‌ ನಾಟೌಟ್:ಪೊಲೀಸ್ ಜೀಪ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ. ಜೀವ ರಕ್ಷಣೆ ಮಾಡಬೇಕಾದ ಪೊಲೀಸರೇ ರಕ್ಷಣೆ ಮಾಡದೇ ಎಸ್ಕೇಪ್ ಆದ ಘಟನೆ ಬಗ್ಗೆ ಚಿಕ್ಕಮಗಳೂರಿನಿಂದ ವರದಿಯಾಗಿದೆ. ಹಿಟ್ ಅಂಡ್ ರನ್ ಮಾಡಿ ಸ್ಕೂಟಿಯಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಪೊಲೀಸ್ ಜೀಪ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಎಸ್ಕೇಪ್ ಆಗಿದ್ದಾರೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜೀವ ರಕ್ಷಣೆ ಮಾಡಬೇಕಾದ ಪೊಲೀಸರು ಮಾನವೀಯತೆ ಮರೆತು ವರ್ತಿಸಿರುವ ಘಟನೆ ನಡೆದಿದೆ. ಪೊಲೀಸ್ ಜೀಪ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಈ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸ್ಕೂಟರ್ ಚಾಲಕನನ್ನು ಗಂಗಾಧರ್ (49) ಎಂದು ಗುರುತಿಸಲಾಗಿದೆ.

ಎಸ್ಕೇಪ್ ಆದ ಪೊಲೀಸರು!

ಸಿಂಗಟಗೆರೆ ಪೊಲೀಸ್ ಠಾಣೆಗೆ ಸೇರಿದ ಜೀಪ್ ವೇಗವಾಗಿ ಬಂದು ಸ್ಕೂಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಪೊಲೀಸರು ಜೀಪ್ ನಿಲ್ಲಿಸದೆ ಪರಾರಿಯಾಗಿದ್ದಾರೆ. ಈ ಘಟನೆ ಕಡೂರು – ಮರವಂಜಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಮೃತದೇಹ ತೆಗೆಯಲು ಬಿಡುತ್ತಿಲ್ಲ. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.ಪ್ರಕರಣ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು,   ಘಟನಾ ಸ್ಥಳದಲ್ಲಿ ನೂರಾರು ಸ್ಥಳೀಯರು ಜಮಾಯಿಸಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

See also  ಸುಳ್ಯ:ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ;ಇತ್ತೀಚಿನ ದಿನಗಳಲ್ಲಿ ಆಡಳಿತಾ ತ್ಮಕ ನ್ಯಾಯ ತೀರ್ಮಾನ ಅತ್ಯಂತ ಸೂಕ್ತ ಹಾಗೂ ಮಹತ್ವಪೂರ್ಣ:ಪ್ರೊ. ಕೆ.ವಿ. ದಾಮೋದರ ಗೌಡ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget