Latestಕ್ರೈಂರಾಜ್ಯವೈರಲ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..! 10 ಮತ್ತು 6 ವರ್ಷದ ಮಕ್ಕಳನ್ನು ಕಳೆದುಕೊಂಡು ತಂದೆಯ ರೋಧನೆ..!

850
Pc Cr: Public Tv

ನ್ಯೂಸ್ ನಾಟೌಟ್: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ಗ್ರಾಮದ ಇಂದು(ಜೂ.6) ನಡೆದಿದೆ.

ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ಮಕ್ಕಳಾದ ನಿಹಾರಿಕಾ(10), ನೇಹಾ(6) ಮೃತರು ಎಂದು ಗುರುತಿಸಲಾಗಿದೆ. ಗಂಡ ಜಯಣ್ಣನ ಜೊತೆ ನಿನ್ನೆ ಲಾವಣ್ಯ ವಾಗ್ವಾದ ನಡೆಸಿದ್ದರು. ಕೌಟುಂಬಿಕ ಜಗಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಮೂಡಿದೆ.

ನಿನ್ನೆ(ಜೂ.5) ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಕ್ಕಳ ದೇಹ ಇಂದು ಕೆರೆಯಲ್ಲಿ ತೇಲಾಡಿದ್ದು ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೂರು ಮೃತದೇಹಗಳನ್ನ ಹೊರತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ವಿಷಯ ತಿಳಿದು ತಂದೆ ರೋಧಿಸುತ್ತಿದ್ದಾನೆ. 

ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ವಜಾ..! ಗುಪ್ತಚರ ಇಲಾಖೆಯ ಮುಖ್ಯಸ್ಥರೂ ಎತ್ತಂಗಡಿ..!

See also  ಧರ್ಮಸ್ಥಳ: ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು..! ರಿಕ್ಷಾದ ಸ್ಥಿತಿ ಕಂಡು ಕುಸಿದು ಬಿದ್ದ ಚಾಲಕ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget