Latestಕ್ರೈಂರಾಜ್ಯ

ಲೆಕ್ಕಪತ್ರ ವಿಚಾರಕ್ಕೆ ಚರ್ಚ್‍ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ..! ಮಧ್ಯಪ್ರವೇಶಿಸಿದ ಪೊಲೀಸರು..!

511

ನ್ಯೂಸ್ ನಾಟೌಟ್ : ದಾವಣಗೆರೆ ಹರಿಹರದ ಆರೋಗ್ಯ ಮಾತೆ ಚರ್ಚ್‍ನಲ್ಲಿ ಲೆಕ್ಕಪತ್ರದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ಇಂದು(ಫೆ.23) ನಡೆದಿದೆ.
ಚರ್ಚ್‍ನ ಲೆಕ್ಕಪತ್ರ ನೀಡಲು ಹಾಗೂ ಅವ್ಯವಸ್ಥೆ ಸರಿ ಪಡಿಸಲು ಚರ್ಚ್ ಪಾಲನಾ ಪರಿಷತ್ ಸದಸ್ಯರು ಹಾಗೂ ಮುಖಂಡರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಆದರೆ ಕ್ಯಾಥೋಲಿಕ್ ಧರ್ಮಾಧ್ಯಕ್ಷ ಬಿಷಪ್ ಪ್ರಾನ್ಸಿಸ್ಸ್ ಸೆರಾವೋ ಲೆಕ್ಕಪತ್ರ ಒದಗಿಸಿರಲಿಲ್ಲ.

ಇದರಿಂದಾಗಿ ಮೂರು ದಿನಗಳ ಕಾಲ ನಡೆಯುವ ಸಭೆಗೆ ಆಗಮಿಸಿದ ಬಿಷಪ್ ಪ್ರಾನ್ಸಿಸ್ಸ್ ಸೆರಾವೋ ಗೆ ಘೇರಾವ್ ಹಾಕಲಾಗಿತ್ತು. ಇದರಿಂದ ಎರಡು ಗುಂಪುಗಳ ನಡುವೆ ಚರ್ಚ್ ಮುಂಭಾಗವೇ ಮಾರಾಮಾರಿ ನಡೆದಿದೆ.ಕೂಡಲೇ ಹರಿಹರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

See also  ಸುಳ್ಯ: ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಶಾಲಾ ಮಕ್ಕಳನ್ನು ಕರೆ ತರುತ್ತಿದ್ದ ಬೈಕ್ ಗೆ ಡಿಕ್ಕಿ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget