ನ್ಯೂಸ್ ನಾಟೌಟ್ : ‘ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ’ ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪೋಸ್ಟ್ ಹಾಕಿದ್ದ ಹಿಂದೂ ಕಾರ್ಯಕರ್ತನ ಮೇಲೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
“ಸಿದ್ದರಾಮಯ್ಯನವರ ಪ್ರಚೋದನಕಾರಿ ಹೇಳಿಕೆ ವಿರುದ್ಧ ಪೋಸ್ಟ್ ಮಾಡಿದ್ದೆ. ಡಿಲೀಟ್ ಆದ ಒಂದು ತಿಂಗಳ ನಂತರ ಇದೀಗ ಪ್ರಕರಣ ದಾಖಲಾಗಿದೆ. ಈ ರೀತಿ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಈ ಬಗ್ಗೆ ನಾನು ಕಾನೂನು ಹೋರಾಟ ನಡೆಸುತ್ತೇನೆ” ಎಂದು ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾನೆ.
ಕಳೆದ ಏ.28 ರಂದು ಬಜರಂಗದಳ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಪೋಸ್ಟ್ ನಲ್ಲಿ ಸಿಎಂ ಗೆ ಗೋಡ್ಸೆ ಬೇಕಾಗಿದ್ದಾರೆ ಎಂದು ಉಲ್ಲೇಖಿಸಿದ್ದರು. ಬಳಿಕ ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿಸಿದ್ದರು.
ಲಾಂಗ್ ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದ ಆಟೋ ಚಾಲಕ ಅರೆಸ್ಟ್..! ವಿಡಿಯೋ ಹರಿಬಿಟ್ಟಿದ್ದ ಚಾಲಕ..!