ನ್ಯೂಸ್ ನಾಟೌಟ್: ಬಡವರ ಖಾತೆಗೆ ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ 5 ಸಾವಿರ ರೂ. ಹಣ ಹಾಕುವುದಾಗಿ ಸುಳ್ಳು ವದಂತಿ ಹಬ್ಬಿದ ಹಿನ್ನೆಲೆ ಕಲಬುರಗಿ ಅಂಚೆ ಕಚೇರಿ ಎದುರು ಖಾತೆ ತೆರೆಯಲು ಜನರು ಸಾಲುಗಟ್ಟಿ ನಿಂತ ಘಟನೆ ನಡೆದಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಪ್ರಧಾನಿ ಮೋದಿ 5 ಸಾವಿರ ರೂ. ಹಣ ಹಾಕುತ್ತಾರೆ. ಇನ್ನೂ ಕರ್ನಾಟಕದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಹೀಗಾಗಿ ಸಿಎಂ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎಂಬ ಸಂದೇಶ ವಾಟ್ಸಪ್ ನಲ್ಲಿ ಹರಿದಾಡಿದೆ.
ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಹಣ ಹಾಕುತ್ತಾರೆ ಹಾಗೂ ಇದಕ್ಕಾಗಿ ಅಂಚೆ ಕಚೇರಿಯಲ್ಲಿ ಡಿಜಿಟಲ್ ಅಕೌಂಟ್ ಹೊಂದಿರಬೇಕು ಎಂದು ಸುಳ್ಳು ವದಂತಿ ಹಬ್ಬಿದೆ. ಈ ಹಿನ್ನೆಲೆ ಕಲಬುರಗಿ ಅಂಚೆ ಕಚೇರಿ ಎದುರು ಡಿಜಿಟಲ್ ಅಕೌಂಟ್ ಗಾಗಿ ಬೆಳಿಗ್ಗೆನಿಂದ ಮಹಿಳೆಯರು ಸೇರಿದಂತೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ.
Click