ರಾಜಕೀಯವೈರಲ್ ನ್ಯೂಸ್

‘ತಾನೆಷ್ಟು ದಿನ ಸಿಎಂ ಅಂತ ಸಿದ್ದರಾಮಯ್ಯಗೇ ಗೊತ್ತಿಲ್ಲ’ ಪಿಎಂ ಮೋದಿ ಸಿಎಂ ಸಿದ್ದುಗೆ ವ್ಯಂಗ್ಯವಾಡಿದ್ದೇಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಗ್ಗೆ ಮತ್ತು ಮುಖ್ಯಮಂತ್ರಿ ಗಾದಿ ಗುದ್ದಾಟದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಆರು ತಿಂಗಳ ಹಿಂದೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಆ ರಾಜ್ಯವನ್ನೇ ಹಾಳು ಮಾಡಿದೆ. ಅಲ್ಲೀಗ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ. ಅಲ್ಲಿನ ಮುಖ್ಯಮಂತ್ರಿಗೆ ತಾನು ರಾಜ್ಯವನ್ನು ಎಷ್ಟು ದಿನ ಮುನ್ನಡೆಸುತ್ತೇನೆ ಎಂಬುದೇ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

ಸಚಿವರ ಸಭೆ ನಡೆಸಿ, ಪಕ್ಷ ಹಾಗೂ ಸರ್ಕಾರಕ್ಕೆ ಡ್ಯಾಮೇಜ್‌ ಆಗುವಂತಹ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ಸಿಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರವಷ್ಟೇ ಖಡಕ್‌ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಭಾನುವಾರ ಮಧ್ಯಪ್ರದೇಶದ ಖಂಡ್ವಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿದ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ನಿಯಮಿತವಾಗಿ ಬರುತ್ತಿದೆ ಎಂದು ಹರಿಹಾಯ್ದರು. ಅಲ್ಲದೆ, ಕರ್ನಾಟಕವನ್ನು ಲೂಟಿ ಹೊಡೆಯಲು ಮುಖ್ಯಮಂತ್ರಿ- ಉಪಮುಖ್ಯಮಂತ್ರಿ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಅಧಿಕಾರ ಹಿಡಿದ ರಾಜ್ಯದಲ್ಲಿ ಭ್ರಷ್ಟಾಚಾರ ನಡೆಸಿ, ಆ ರಾಜ್ಯವನ್ನು ಹಾಳು ಮಾಡುವ ಕಾರ್ಯದಲ್ಲಿ ಕಾಂಗ್ರೆಸ್‌ ತೊಡಗುತ್ತದೆ. ಒಳಜಗಳದಲ್ಲಿ ಮುಳುಗುತ್ತದೆ. ಜನರಿಗೆ ನೀಡಲು ಅವರ ಬಳಿ ಸಮಯವೇ ಇರುವುದಿಲ್ಲ. ಇದೇ ಕಾಂಗ್ರೆಸ್ಸಿನ ಸಂಸ್ಕೃತಿ. ಒಳಜಗಳ ಮುಂದುವರಿದಾಗ, ದೆಹಲಿಯಲ್ಲಿ ಕುಳಿತಿರುವ ನ್ಯಾಯಾಧೀಶರು ಇತ್ಯರ್ಥ ಮಾಡಿ, ಅಂಗಡಿ ನಡೆಸಲು ಹೇಳುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ವಿರುದ್ಧ ಹರಿಹಾಯ್ದರು.

ಮಧ್ಯಪ್ರದೇಶದ ಜನರು ಬೇರೆ ರಾಜ್ಯಗಳಿಂದ ಈ ವಿಷಯವನ್ನು ತಿಳಿದುಕೊಳ್ಳಬೇಕು. ಸಮಾಜವನ್ನು ವಿಭಜಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು. ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ, ಸಿದ್ದರಾಮಯ್ಯಗೆ 2.5 ವರ್ಷ ಹಾಗೂ ಡಿಕೆಶಿಗೆ 2.5 ವರ್ಷ ಸಿಎಂ ಹುದ್ದೆ ಲಭಿಸಲಿದೆ ಎಂಬ ಮಾತುಗಳು ಆ ಪಕ್ಷದಲ್ಲೇ ನಡೆಯುತ್ತಿವೆ.

ಆದರೆ ಸಿಎಂ ಬದಲಾವಣೆ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸುತ್ತಾ ಬಂದಿದ್ದಾರೆ.
ರಾಜಸ್ಥಾನದಲ್ಲಿ ಬಹುಮತ ಪಡೆದ ಬಳಿಕವೂ ನಾಲ್ಕೂವರೆ ವರ್ಷಗಳಿಂದ ಪ್ರತಿದಿನ 24 ತಾಸುಗಳ ಕಾಲ ಎರಡು ಗುಂಪುಗಳು ಕಿತ್ತಾಟದಲ್ಲಿ ತೊಡಗಿವೆ. ಮಾಫಿಯಾರಾಜ್‌, ಭ್ರಷ್ಟಾಚಾರ, ಲೂಟಿಗೆ ಕಾಂಗ್ರೆಸ್‌ ಉತ್ತೇಜನ ನೀಡುತ್ತದೆ ಎಂದು ಕಿಡಿಕಾರಿದರು ಎಂದು ವರದಿ ತಿಳಿಸಿದೆ.

Related posts

ಆಸ್ಟ್ರೇಲಿಯಾ ಎದುರು ಭಾರತದ ಸೋಲಿಗೆ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನೀಡಿದ ವಿಚಿತ್ರ ಕಾರಣವೇನು? ಪಾಂಡವರಿಗೂ ವಿಶ್ವಕಪ್ ಗೂ ಏನು ಸಂಬಂಧ?

ಇಬ್ಬರನ್ನು ಅಪಹರಿಸಿ ಕತ್ತು ಕೊಯ್ದು ನಕ್ಸಲರು..! ರಹಸ್ಯ ಮಾಹಿತಿ ನೀಡಿದವರ ಬಗ್ಗೆ ಪ್ರೆಸ್ ನೋಟ್ ಬಿಡುಗಡೆ ಮಾಡಿದ ನಕ್ಸಲರು..!

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ ನಲ್ಲಿ ಮಹತ್ವದ ಸುಳಿವು..! ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿದ್ದಾನಾ..?