ಕರಾವಳಿಕ್ರೈಂವೈರಲ್ ನ್ಯೂಸ್

ಸಿಎಂ ಸಿದ್ದು ಬಗ್ಗೆ ಅಶ್ಲೀಲ ಆಡಿಯೋ ವೈರಲ್, ಕೊಕ್ಕಡದ ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್, ಸಹೋದರ ಪ್ರತಿಕ್ರಿಯಿಸಿದ್ದೇನು..?

219

ನ್ಯೂಸ್ ನಾಟೌಟ್: ಕೊಕ್ಕಡದ ಯುವಕನೊಬ್ಬ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಅನ್ನುವ ಆಡಿಯೋವೊಂದು ವೈರಲ್ ಆಗಿದ್ದು ಈ ಹಿನ್ನೆಲೆಯಲ್ಲಿ ಯುವಕ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಪೊಲೀಸರು ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ರಜಿತ್ ಭಂಡಾರಿ ವಿರುದ್ಧ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅವರ ಸಹೋದರ ರಂಜು ಭಂಡಾರಿ ಕೊಕ್ಕಡ ಅವರು ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿ, “ಎಫ್‌ಐಆರ್ ದಾಖಲಾಗಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಸಹೋದರನಿಗೂ ಗೊತ್ತಿಲ್ಲ” ಎಂದು ತಿಳಿಸಿದ್ದಾರೆ.

See also  ಕನಸು ಕಾಣ್ತಾ ಮರ್ಮಾಂಗವನ್ನೇ ಕತ್ತರಿಸಿಕೊಂಡ ಯುವಕ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget