ಕ್ರೈಂರಾಜ್ಯವೈರಲ್ ನ್ಯೂಸ್

ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು..! ಎಳೆದಾಡಿದ ಶ್ವಾನಗಳು, ಕೋಮಾ ಸ್ಥಿತಿಯಲ್ಲಿ ಯುವತಿ

150
Representative image

ನ್ಯೂಸ್ ನಾಟೌಟ್: ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ರಾಯಚೂರು ಜಿಲ್ಲೆಯ ಮಡ್ಡಿಪೇಟೆಯಲ್ಲಿ ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ.

ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.

ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತಹೆಪ್ಪುಗಟ್ಟಿದ್ದು, ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಾಳೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಬಡ ಕುಟುಂಬ ದಿಕ್ಕು ಕಾಣದಂತಾಗಿದೆ.

ಘಟನೆ ಕುರಿತು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಪ್ರತಿಕ್ರಿಯಿಸಿದ್ದು, ಯುವತಿಯ ಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದಿದ್ದೇನೆ. ಈಗಾಗಲೇ ಟೆಂಡರ್ ಕರೆದು ಬೀದಿ ನಾಯಿ ಹಿಡಿಯಲು ಏಜೆನ್ಸಿಗೆ ಒಪ್ಪಿಸಲಾಗಿದೆ. ಇನ್ನೂ ಹೆಚ್ಚಿನ ಏಜೆನ್ಸಿಗಳಿಗೆ ಗುತ್ತಿಗೆ ನೀಡಿ ನಾಯಿಗಳನ್ನ ಹಿಡಿಯುತ್ತೇವೆ ಎಂದಿದ್ದಾರೆ.

Click

https://newsnotout.com/2024/12/kannada-news-3-days-tommorrow-public-holiday/
https://newsnotout.com/2024/12/social-media-misused-kannada-news-photos-viral-photo/
https://newsnotout.com/2024/12/murudeshwara-4-students-suspend-and-3-hospitalised/
See also  ಮಂಗಳೂರು: ಆಧಾರ್ ತಿದ್ದುಪಡಿಗೆಂದು ಮನೆಯಿಂದ ತೆರಳಿದಾಕೆ ನಾಪತ್ತೆ..! ಪತಿ ನೀಡಿದ ದೂರಿನಲ್ಲೇನಿದೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget