ಕತಾರ್ ನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂತು ರೂಪಾಂತರಿ ಇಟಾ ವೈರಸ್..! ಬೆಚ್ಚಿಬಿದ್ದ ಜನ

4

ಮಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದ.ಕ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಂಡರೂ ಕೊರೊನಾ ಪ್ರಕರಣ ಸಂಖ್ಯೆ ಇಳಿಮುಖವಾಗುತ್ತಿಲ್ಲ. ಸರಕಾರವು ಮೂರನೇ ಅಲೆ ಇರಲಿದೆ ಎಂಬ ಎಚ್ಚರಿಕೆ ಗಂಟೆಯನ್ನು ನೀಡಿತ್ತು. ಈ ಮಧ್ಯೆ ಕೊರೊನಾ ವಿಪರೀತ ಏರಿಕೆ ಕಾಣುತ್ತಿರುವ ಹಿನ್ನಲೇ ಮೂರನೇ ಅಲೆ ಬಂದೆ ಬಿಟ್ಟಿತೆನೋ ಎಂಬ ಆತಂಕ ಮನೆ ಮಾಡಿದೆ. ಇದರ ಮಧ್ಯೆ ಸರಕಾರಕ್ಕೆ ಇನ್ನೊಂದು ಸವಾಲು ಎದುರಾಗಿದೆ. ಕತಾರ್ ನಿಂದ ದ.ಕ ಜಿಲ್ಲೆ ಯ ಕಾರ್ಕಳಕ್ಕೆ ಬಂದಿರುವ ವ್ಯಕ್ತಿಯೊಬ್ಬನಿಗೆ ಇಟಾ ವೈರಸ್ ಪತ್ತೆಯಾಗಿದೆ. ಮಾದರಿಯನ್ನು ಪರೀಕ್ಷೆಗೊಳಪಡಿಸಿ ನಾಲ್ಕು ತಿಂಗಳ ಬಳಿಕ ವಿಷಯ ಬಹಿರಂಗವಾಗಿದೆ.

ಏನಿದು ಇಟಾ ವೈರಾಣು ?

ಈ ಹೊಸ ರೂಪಾಂತರಿ ವೈರಾಣು ಬ್ರಿಟನ್ ಮತ್ತು ನೈಜೀರಿಯಾ ಭಾಗದಲ್ಲಿ ಪತ್ತೆಯಾಗಿತ್ತು. ಬಳಿಕ ಇದು ಭಾರತದ ಮಿಜೋರಾಂ ಸೇರಿದಂತೆ ಕೆಲವೆಡೆ ಕಂಡು ಬಂದಿತ್ತು. ಇದೀಗ ಕತಾರ್ ನಿಂದ ಬಂದಿರುವ ವ್ಯಕ್ತಿಗೂ ಅಲ್ಲಿಂದಲೇ ಸೋಂಕು ತಗುಲಿರುವುದು ದೃಢವಾಗಿದೆ.

ಇಟಾ ವೈರಸ್ ಪತ್ತೆ ಹಚ್ಚಿದ್ದು ಹೇಗೆ?

4 ತಿಂಗಳ ಹಿಂದೆ ಕತಾರ್ ನಿಂದ ಬಂದಿರುವ ವ್ಯಕ್ತಿಯನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಪರೀಕ್ಷಿಸಲಾಗಿತ್ತು. ಈ ವೇಳೆ ಕೊರೊನಾ ಪತ್ತೆಯಾಗಿತ್ತು.ಅವರ ಸ್ಯಾಂಪಲ್ಸ್ ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಜಿನೊಮಿಕ್ ಅಧ್ಯಯನ ನಡೆಸಲಾಗಿತ್ತು. ಇಟಾ ವೈರಸ್ ಬಗ್ಗೆ ದ.ಕ ಡಿಹೆಓ ಡಾ.ಕಿಶೋರ್ ಕುಮಾರ್ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

Related Articles

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ಶೀಲ ಶಂಕಿಸಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ..! ಆರೋಪಿ ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್: ಶೀಲ ಶಂಕಿಸಿ ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಆನೇಕಲ್ ಹೆಬ್ಬಗೋಡಿ...

Uncategorizedಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ...

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ರಥೋತ್ಸವದ ವೇಳೆ ಗುರುಬಸವೇಶ್ವರ ರಥದ ಸ್ಟೇರಿಂಗ್ ಕಟ್..! ಸ್ಕೂಟಿ ಹಾಗೂ ಬೈಕ್‌ ಗಳು ರಥದಡಿಗೆ ಸಿಲುಕಿ ಅಪ್ಪಚ್ಚಿ..!

ನ್ಯೂಸ್ ನಾಟೌಟ್ : ವಿಜಯನಗರ ಜಿಲ್ಲೆಯ ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅವಘಡ ಸಂಭವಿಸಿದ್ದು,...

@2025 – News Not Out. All Rights Reserved. Designed and Developed by

Whirl Designs Logo