Latestಕ್ರೈಂಬೆಂಗಳೂರುರಾಜ್ಯ

ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ..! ಆಶ್ರಮದಲ್ಲಿ ಘಟನೆ..!

852

ನ್ಯೂಸ್ ನಾಟೌಟ್: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (81), ರಾಧ (74) ಆತ್ಮಹತ್ಯೆಗೆ ಶರಣಾದ ದಂಪತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಎಂಬ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ(ಜೂ.23) ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.

ಮಂಗಳವಾರ ಬೆಳಗಿನ ಜಾವ ದಂಪತಿ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

See also  ಮಡಿಕೇರಿ:ಮದುವೆ ವಯಸ್ಸಾದರೂ ಮದುವೆಯಾಗಿಲ್ಲವೆಂಬ ಕೊರಗು: ಮನನೊಂದು ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget