ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿ ರಾಮಣ್ಣ ಪೂಜಾರಿ ಎಂದು ತಿಳಿದು ಬಂದಿದ್ದು ಸಾವಿಗೆ ನಿಖರ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ. ಕೊಲೆ ಆಗಿರಬಹುದೇ ಅನ್ನುವ ನಿಟ್ಟಿನಲ್ಲಿಯೂ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.