ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ, ಹಲವು ಮಾದಕ ವಸ್ತುಗಳು ಪತ್ತೆ

239

ನ್ಯೂಸ್ ನಾಟೌಟ್: ಮಂಗಳೂರು ನಗರದ ಕೊಡಿಯಾಲಬೈಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಮಾಹಿತಿ ಹಿನ್ನಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ತಪಾಸಣೆ ವೇಳೆ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಕಾ ಪತ್ತೆಯಾಗಿದೆ.

ಜಿಲ್ಲಾ ಕಾರಾಗೃಹಕ್ಕೆ ದಿಢೀರನೆ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದ್ದು, ದಾಳಿಯ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆ ವ್ಯಕ್ತವಾಗಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ನಿರ್ಧರಿಸಿರುವ ಪೊಲೀಸರು, ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದ್ದು, ಡಿಸಿಪಿ, ಎಸಿಪಿ, ಇನ್​ಸ್ಪೆಕ್ಟರ್, ಪಿಎಸ್​ಐ ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಬಳಿಕ ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್​​​ ಜೈನ್, ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದೇವೆ. ಆದರೆ ತಪಾಸಣೆ ವೇಳೆ ಬೀಡಿ, ಸಿಗರೇಟ್​​, ತಂಬಾಕು ಬಿಟ್ಟು ಬೇರೇನು ಸಿಕ್ಕಿಲ್ಲ. ಮುಂದಿನ ದಿನಗಳಲ್ಲೂ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರು.

See also  ಸುಳ್ಯ: ಬೈಕ್ ಮತ್ತು ಕಾರು ನಡುವೆ ಅಪಘಾತ..! ಪ್ರಾಣಪಾಯದಿಂದ ಪಾರಾದ ಸವಾರರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget