Latestದಕ್ಷಿಣ ಕನ್ನಡರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ..! ಸರಣಿ ಕೊಲೆಗಳ ಬೆನ್ನಲ್ಲೇ ಮಂಗಳೂರಿಗೆ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ..!

670

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬಂಟ್ವಾಳದಲ್ಲಿ ಅಬ್ದುಲ್ ರಹಿಮ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್‌ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ರನ್ನು ವರ್ಗಾವಣೆ ಮಾಡಿ ಮೇ 29ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಕ್ರಿಮಿನಲ್ ಇನ್ವೆ,ಸ್ಟಿಗೇಶನ್ ಡಿಪಾರ್ಟ್ ಮೆಂಟ್ ಗೆ ವರ್ಗಾಯಿಸಲಾಗಿದೆ. ಇನ್ನು ಮಂಗಳೂರು ಪೊಲೀಸ್ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಉಡುಪಿ ಎಸ್ಪಿಯಾಗಿದ್ದ ಅರುಣ್.ಕೆ ಅವರನ್ನು ದಕ್ಷಿಣ ಕನ್ನಡ ಪೊಲಿಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನೊಂದೆಡೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅವರನ್ನ ನೇಮಕ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಬೊರಸೆ ಭೂಷಣ್ ನೇಮಿಸಲಾಗಿದೆ. ಇನ್ನು ಇಡಾ ಮಾರ್ಟಿನ್ ಅವರಿಗೆ ಸ್ಥಳ ತೋರಿಸಲಾಗಿಲ್ಲ.

ಈ ವರ್ಗಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಈ ಸಭೆಯಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸುವ ಸಂಬಂಧ ಮಹತ್ವದ ಮಾತುಕತೆಯಾಗಿದೆ.

See also  ನೀರಿಲ್ಲದೆ ಕರ್ನಾಟಕದ 4 ವಿದ್ಯುತ್ ಘಟಕಗಳು ಬಂದ್..! ವಿದ್ಯುತ್ ಅಭಾವದ ಭೀತಿ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget