ಕರಾವಳಿಶಿಕ್ಷಣ

ಚುನಾವಣೆ ಸಂದರ್ಭ ಕರ್ತವ್ಯಲೋಪ: ದ.ಕ.ಡಿಡಿಪಿಯು ಅಮಾನತು

205

ನ್ಯೂಸ್‌ ನಾಟೌಟ್‌: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭ ಕರ್ತವ್ಯಲೋಪ ಎಸಗಿದ ಆರೋಪದಡಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.

ಮೇ 9ರಂದು ಜಿಲ್ಲಾ ಚುನಾವಣಾಧಿಕಾರಿ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುವಂತೆ ಡಿಡಿಪಿಯು ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಜಯಣ್ಣ ಅವರು ಜಿಲ್ಲಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆಯದೆ ಬೆಂಗಳೂರಿಗೆ ತೆರಳಿದ್ದು, ಇದರಿಂದ ಗೈರಾಗಿದ್ದರು. ಈ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಅದಕ್ಕೆ ನೀಡಿದ ಉತ್ತರ ಸಮರ್ಪಕವಾಗಿರದ ಕಾರಣದಿಂದ ಡಿಡಿಪಿಯು ಅವರನ್ನು ಅಮಾನತುಗೊಳಿಸಲಾಗಿದೆ. ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪ್ರಭಾರ ಡಿಡಿಪಿಯು ಆಗಿ ನೇಮಕ ಮಾಡಲಾಗಿದೆ.

See also  ಪರೀಕ್ಷೆಗೆ ಹಾಜರಾಗಲು ಬಂದಿದ್ದ ವಿದ್ಯಾರ್ಥಿಯ ಹಾಲ್‌ ಟಿಕೆಟ್ ಕಸಿದು ಹಾರಿ ಹೋದ ಹದ್ದು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget