ಕರಾವಳಿ

ದಕ್ಷಿಣ ಕನ್ನಡದಿಂದ ಕೇರಳಕ್ಕೆ ಇನ್ನೆರಡು ತಿಂಗಳು ಪ್ರವೇಶವಿಲ್ಲ, ಆಗಮನ ಹಾಗೂ ನಿರ್ಗಮನ ನಿಷೇಧ: ಜಿಲ್ಲಾಧಿಕಾರಿ ಆದೇಶ

1.1k

ಮಂಗಳೂರು: ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವುದನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳಕ್ಕೆ ತೆರಳುವುದಕ್ಕೆ ನಿಷೇಧ ಹೇರಲಾಗಿದೆ. ಒಟ್ಟು ಎರಡು ತಿಂಗಳುಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು ಸ್ವತಃ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಕೇರಳದ ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳು ಹೆಚ್ಚಿನವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಇಲ್ಲಿಂದ ಅಲ್ಲಿಗೆ ಸದ್ಯ ತೆರಳುವಂತಿಲ್ಲ ಅಥವಾ ರಜೆ ಮೇಲೆ ಅಲ್ಲಿಗೆ ಹೋಗಿದ್ದವರು ಇಲ್ಲಿಗೆ ಬರುವಂತಿಲ್ಲ. ಈ ವಿಚಾರವನ್ನು ಕಡ್ಡಾಯವಾಗಿ ಆಯಾ ಶಿಕ್ಷಣ ಸಂಸ್ಥೆಗಳು ತಿಳಿಸಬೇಕು ಎಂದು ಸೂಚಿಸಲಾಗಿದೆ.

See also  ಬೇಸಿಗೆಯ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಯಾವ ಶಾಲೆಗಳಿಗೆ ಇದು ಅನ್ವಯ..?
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget