Latest

ಬೆಳ್ತಂಗಡಿ:ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ನೀಡುತ್ತಿದ್ದ ಕಾರ್ಕಳದ ಸೈಯದ್ ಅರೆಸ್ಟ್!ವಾಲಿಬಾಲ್ ತರಬೇತಿದಾರನ ಮೊಬೈಲ್ ಪರಿಶೀಲನೆ ವೇಳೆ ಅಶ್ಲೀಲ ವಿಡಿಯೋಗಳು ಪತ್ತೆ !!

422

ನ್ಯೂಸ್‌ ನಾಟೌಟ್: ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನಲೆ ಯುವಕನನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತನನ್ನು ಕಾರ್ಕಳ ನಿವಾಸಿ ಸೈಯದ್ ಎಂದು ಗುರುತಿಸಲಾಗಿದೆ.

ಆರೋಪಿಯು ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ.ಈತನ ವಿರುದ್ಧ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಕಬ್ಬಡ್ಡಿ ಆಟಗಾರ ಎಂದು ತಿಳಿದು ಬಂದಿದೆ.

See also  ಸುಳ್ಯ :ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ವಿಸ್ತೃತ ಕಟ್ಟಡ ಉದ್ಘಾಟನಾ ಸಮಾರಂಭ,ಮಾಜಿ ಮುಖ್ಯ ಮಂತ್ರಿ ಡಿ.ವಿ.ಎಸ್‌, ಧರ್ಮಪಾಲನಾಥ ಸ್ವಾಮೀಜಿ ಸಹಿತ ಗಣ್ಯರು ಭಾಗಿ
  Ad Widget   Ad Widget   Ad Widget   Ad Widget