ನ್ಯೂಸ್ ನಾಟೌಟ್:ಕಾಲೇಜು ವಿದ್ಯಾರ್ಥಿನಿ ಜತೆ ಅನ್ಯಧರ್ಮದ ಯುವಕನೋರ್ವ ಹೊಟೇಲೊಂದರಲ್ಲಿ ಜ್ಯೂಸ್ ಕುಡಿಯುತ್ತಿದ್ದ ಘಟನೆ ಬಗ್ಗೆ ಪುತ್ತೂರಿನಿಂದ ವರದಿಯಾಗಿದೆ.ಈ ವೇಳೆ ವಿದ್ಯಾರ್ಥಿನಿ ಹಾಗೂ ಯುವಕನನ್ನು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿನಿ ಪುತ್ತೂರಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಈಕೆ ಮೂಲತಃ ಶಿವಮೊಗ್ಗದವಳೆಂದು ತಿಳಿದು ಬಂದಿದೆ. ಆರಂಭದಲ್ಲಿ ಕಾಲೇಜ್ ಹಾಸ್ಟೆಲ್ ನಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದ ಆಕೆ ಪ್ರಸ್ತುತ ನೆಹರೂ ನಗರದ ಪಿಜಿಯಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದಾಳೆ ಎನ್ನಲಾಗಿದೆ.
ಏನಿದು ಘಟನೆ?
ಬೆಳಗ್ಗೆ ಪುತ್ತೂರು ಬಸ್ ನಿಲ್ದಾಣದ ಬಳಿಯ ಜ್ಯೂಸ್ ಪಾರ್ಲರ್ ನಲ್ಲಿ ಈಕೆ ಅನ್ಯ ಧರ್ಮದ ಯುವಕನೊಂದಿಗೆ ಜ್ಯೂಸ್ ಕುಡಿಯುತ್ತಿದ್ದಳು ಎನ್ನಲಾಗಿದೆ. ಈ ವೇಳೆ ಸ್ಥಳೀಯರು ಗಮನಿಸಿದ್ದು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅವರು ಪೊಲೀಸರ ಮೂಲಕ ಪುತ್ತೂರು ಮಹಿಳಾ ಠಾಣೆಗೆ ಒಪ್ಪಿಸಿದರು. ವಿಚಾರಣೆಯ ವೇಳೆ ಯುವಕ ಹಾಗೂ ವಿದ್ಯಾರ್ಥಿನಿ ಒಂದೇ ಊರಿನವರಾಗಿದ್ದು ಪರಸ್ಪರ ಪರಿಚಿತರು ಎಂದು ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಮನೆಯವರಿಗೆ ಮಾಹಿತಿ ನೀಡಿದ್ದು, ಅವರು ಕೂಡ ಯುವಕನ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.