ಕರಾವಳಿಪುತ್ತೂರುಪುತ್ತೂರುಮಂಗಳೂರುಸುಳ್ಯ

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ವರ್ಗಾವಣೆ, ಜಿಲ್ಲೆಗೆ ಹೊಸ ಎಸ್ ಪಿ ನೇಮಕ

142

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಷ್ಟು ದಿನಗಳ ತನಕ ಕಾರ್ಯ ನಿರ್ವಹಿಸುತ್ತಿದ್ದ ಸಿಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯತೀಶ್ .ಎನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ವರ್ಗಾವಣೆ ಆದೇಶ ಮಂಗಳವಾರ (ಜೂ.3) ರಾತ್ರಿ ಬಂದಿದೆ ಎಂದು ತಿಳಿದು ಬಂದಿದೆ. ರಿಷ್ಯಂತ್ ಮುಂದೆ ವೈರ್ ಲೆಸ್ ವಿಭಾಗದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
2013ನೇ ಸಾಲಿನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿರುವ ರಿಷ್ಯಂತ್ ಪುತ್ತೂರಿನಲ್ಲಿ ಎಎಸ್ಪಿಯಾಗಿ, ಬಾಗಲಕೋಟೆ, ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ದಾವಣಗೆರೆ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಅವರನ್ನು ವಿಧಾನಸಭಾ ಚುನಾವಣೆ ಸಂದರ್ಭ ಬೆಂಗಳೂರಿನ ಪೊಲೀಸ್‌ ಮಹಾನಿರ್ದೇಶಕರ ಕಚೇರಿಗೆ ವರ್ಗ ಮಾಡಲಾಗಿತ್ತು.

See also  ಸೌಜನ್ಯ ಕುಟುಂಬದಿಂದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳ ಭೇಟಿ, ಸೌಜನ್ಯ ನ್ಯಾಯಕ್ಕಾಗಿ ಆದಿಚುಂಚನಗಿರಿ ಮಠ ಜೊತೆಗಿರುತ್ತೆ, ಸ್ವಾಮೀಜಿ ಪುನರುಚ್ಚಾರ
  Ad Widget   Ad Widget   Ad Widget   Ad Widget   Ad Widget   Ad Widget   Ad Widget