ಬೆಂಗಳೂರುವೈರಲ್ ನ್ಯೂಸ್ಸಿನಿಮಾ

ನನ್ನ ಭೇಟಿಗೆ ದರ್ಶನ್ ಸಿಗುತ್ತಿಲ್ಲ ಎಂದ ನಟ ಡಾಲಿ ಧನಂಜಯ್..! ನನ್ನ ಮದುವೆಗೆ ದರ್ಶನ್ ಬಂದ್ರೆ ತುಂಬಾ ಸಂತೋಷ ಎಂದ ನಟ

443

ನ್ಯೂಸ್‌ ನಾಟೌಟ್: ನನ್ನ ಮದುವೆಗೆ ದರ್ಶನ್ ಅವರು ಬಂದರೆ ನನಗೆ ತುಂಬಾ ಸಂತೋಷ. ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.
ಫೆ.15 ಮತ್ತು 16ರಂದು ಡಾಲಿ ಧನಂಜಯ್ ಮದುವೆ ಹಿನ್ನೆಲೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಮದುವೆಗೆ ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನ ಕರೆಯುವ ಪ್ರಯತ್ನ ಮಾಡುತ್ತಿದ್ದೇನೆ. ದರ್ಶನ್‍ ರವರು ಸಿಗುತ್ತಿಲ್ಲ. ದರ್ಶನ್ ಅವರು ನನ್ನ ಮದುವೆಗೆ ಬಂದರೆ ನನಗೆ ಸಂತೋಷ” ಎಂದರು.

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ನಡೆಯಲಿರುವ ಮದುವೆ ಕುರಿತು ಪ್ರತಿಕ್ರಿಯಿಸಿ, ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಎಲ್ಲವೂ ಮೈಸೂರಿನಿಂದಲೇ. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಸಿಗಲಿ ಎಂದು ಹೇಳಿದರು.

ಅಭಿಮಾನಿಗಳಿಗೆ ಮುಕ್ತ ಅವಕಾಶ ನೀಡಿದ್ದೇವೆ. ಎಲ್ಲರೂ ನೇರವಾಗಿ ಬಂದು ನನಗೆ ಆಶೀರ್ವಾದ ಮಾಡಿ ಹೋಗಬಹುದು. ವಿದ್ಯಾಪತಿ ದ್ವಾರ ಮೂಲಕ ಅಭಿಮಾನಿಗಳಿಗೆ ಎಂಟ್ರಿ ಇರುತ್ತದೆ. ಚಿತ್ರರಂಗ, ರಾಜಕೀಯ ನಾಯಕರು ಎಲ್ಲರನ್ನೂ ಮದುವೆಗೆ ಕರೆದಿದ್ದೇನೆ. ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂಬುದು ನಮ್ಮ ಬಯಕೆ ಎಂದು ಹೇಳಿದ್ದಾರೆ.

See also  ವಿಜಯೇಂದ್ರ ನೀನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದ ರಮೇಶ್‌ ಜಾರಕಿಹೊಳಿ..! ಸ್ವಪಕ್ಷೀಯರಲ್ಲಿ ತೀವ್ರಗೊಂಡ ಬಣ ಬಡಿದಾಟ, ಏಕವಚನದಲ್ಲೇ ವಾಗ್ದಾಳಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget