ಕರಾವಳಿ

ಸಮಯ ಪ್ರಜ್ಞೆ ಮೆರೆದ ಚಾಲಕ, ಸುಬ್ರಹ್ಮಣ್ಯದಲ್ಲಿ ತಪ್ಪಿತು ಭಾರಿ ರೈಲು ದುರಂತ

786

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಗಳೂರು ರೈಲ್ವೆ ಟ್ರ್ಯಾಕ್‌ನಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಹೋದಾಗ ಎಡಮಂಗಲ ಸಮೀಪ ಹಳಿ ಬಿರುಕು ಬಿಟ್ಟಿರುವುದು ರೈಲು ಚಾಲಕನಿಗೆ ತಿಳಿದು ಬಂದಿದೆ. ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿರುವುದು ಈ ವಿಚಾರ ಗೊತ್ತಾಗಿದೆ. ತಕ್ಷಣ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮಾತ್ರವಲ್ಲ ಚಾಲಕ ರೈಲನ್ನು ನಿಲ್ಲಿಸಿದ್ದಾರೆ. ನಂತರ ಅಧಿಕಾರಿಗಳು, ತಂತ್ರಜ್ಞರು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಿದ್ದಾರೆ. ನಂತರ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

See also  Udupi Toilet Case :ಉಡುಪಿ ಟಾಯ್ಲೆಟ್‌ ವಿಡಿಯೊ ಪ್ರಕರಣಕ್ಕೆ ಟ್ವಿಸ್ಟ್, ಭಯೋತ್ಪಾದನೆ,ಲವ್‌ ಜಿಹಾದ್‌ ಆಯಾಮ
  Ad Widget   Ad Widget     Ad Widget   Ad Widget   Ad Widget   Ad Widget