ಕರಾವಳಿ

ಸಮಯ ಪ್ರಜ್ಞೆ ಮೆರೆದ ಚಾಲಕ, ಸುಬ್ರಹ್ಮಣ್ಯದಲ್ಲಿ ತಪ್ಪಿತು ಭಾರಿ ರೈಲು ದುರಂತ

699

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಗಳೂರು ರೈಲ್ವೆ ಟ್ರ್ಯಾಕ್‌ನಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಹೋದಾಗ ಎಡಮಂಗಲ ಸಮೀಪ ಹಳಿ ಬಿರುಕು ಬಿಟ್ಟಿರುವುದು ರೈಲು ಚಾಲಕನಿಗೆ ತಿಳಿದು ಬಂದಿದೆ. ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿರುವುದು ಈ ವಿಚಾರ ಗೊತ್ತಾಗಿದೆ. ತಕ್ಷಣ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮಾತ್ರವಲ್ಲ ಚಾಲಕ ರೈಲನ್ನು ನಿಲ್ಲಿಸಿದ್ದಾರೆ. ನಂತರ ಅಧಿಕಾರಿಗಳು, ತಂತ್ರಜ್ಞರು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಿದ್ದಾರೆ. ನಂತರ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

See also  ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ನಿಧನ
  Ad Widget   Ad Widget   Ad Widget   Ad Widget   Ad Widget