ಸುಳ್ಯ

ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ

ಸುಳ್ಯ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೆ ನಡೆಸಬೇಕು ಅಥವಾ ಬೇಡವೇ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಲಾಗಿದ್ದು ಈ ಸಮಿತಿಗೆ ಸದಸ್ಯರಾಗಿ ಶಿಕ್ಷಣ ತಜ್ಞ ಹಾಗೂ ಸ್ನೇಹಿ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ ಚಂದ್ರಶೇಖರ್‌ ದಾಮ್ಲೆ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಶಾಲೆಗಳ ತೆರೆಯುವ ಕುರಿತು ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಟಾಸ್ಕ್ ಫೋರ್ಸ್‌ ಅನ್ನು ರಚಿಸಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರು ಇರಲಿದ್ದಾರೆ ಎಂದು ತಿಳಿಸಲಾಗಿದೆ. ಈ ಬಗ್ಗೆ ನ್ಯೂಸ್‌ ನಾಟೌಟ್ ಕನ್ನಡ ವೆಬ್‌ಸೈಟ್‌ಗೆ ಪ್ರತಿಕ್ರಿಯಿಸಿದ ಡಾ ದಾಮ್ಲೆಯವರು, ಇದೊಂದು ಜವಾಬ್ದಾರಿಯುತ ಕೆಲಸವಾಗಿದ್ದು ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ ಅನ್ನುವ ವಿಶ್ವಾಸ ನನಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

Related posts

ನೆಲ್ಯಾಡಿ: ಕಿವಿ ಕೇಳಿಸದ ಮಾತು ಬಾರದ ವ್ಯಕ್ತಿಗೆ ತಂಡದಿಂದ ಥಳಿತ, ಪುತ್ತೂರು ಆಸ್ಪತ್ರೆಗೆ ದಾಖಲು

ಸುಳ್ಯ : ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರೆಶರ್ಸ್‌ ಡೇ, ವಿದ್ಯಾರ್ಥಿ ಪರಿಷತ್‌ ಉದ್ಘಾಟನೆ

ಕಾರ್ಕಳ:ಕುಟುಂಬ ಸಮೇತ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್ ಕುಮಾರ್