ಸುಳ್ಯ

ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ

864

ಸುಳ್ಯ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೆ ನಡೆಸಬೇಕು ಅಥವಾ ಬೇಡವೇ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಲಾಗಿದ್ದು ಈ ಸಮಿತಿಗೆ ಸದಸ್ಯರಾಗಿ ಶಿಕ್ಷಣ ತಜ್ಞ ಹಾಗೂ ಸ್ನೇಹಿ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ ಚಂದ್ರಶೇಖರ್‌ ದಾಮ್ಲೆ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಶಾಲೆಗಳ ತೆರೆಯುವ ಕುರಿತು ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಟಾಸ್ಕ್ ಫೋರ್ಸ್‌ ಅನ್ನು ರಚಿಸಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರು ಇರಲಿದ್ದಾರೆ ಎಂದು ತಿಳಿಸಲಾಗಿದೆ. ಈ ಬಗ್ಗೆ ನ್ಯೂಸ್‌ ನಾಟೌಟ್ ಕನ್ನಡ ವೆಬ್‌ಸೈಟ್‌ಗೆ ಪ್ರತಿಕ್ರಿಯಿಸಿದ ಡಾ ದಾಮ್ಲೆಯವರು, ಇದೊಂದು ಜವಾಬ್ದಾರಿಯುತ ಕೆಲಸವಾಗಿದ್ದು ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ ಅನ್ನುವ ವಿಶ್ವಾಸ ನನಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

See also  ಸುಳ್ಯದಲ್ಲೂ ಇದೀಗ ಹ್ಯುಂಡೈ CRETA ಕಾರು ಶೋರೂಂ, ನಿಮ್ಮ ಕನಸಿನ ಕಾರು ಖರೀದಿಸಲು ಇದೆ ಸುವರ್ಣಾವಕಾಶ..!
  Ad Widget   Ad Widget   Ad Widget   Ad Widget   Ad Widget