Latestಕರಾವಳಿಕ್ರೈಂದೇಶ-ವಿದೇಶ

ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ನಿಗೂಢ ಸಾವಿನ ಬಗ್ಗೆ ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು..! ಆಕೆಯ ಪೋಷಕರ ಅನುಮಾನಗಳೇನು..?

802

ನ್ಯೂಸ್ ನಾಟೌಟ್: ಪಂಜಾಬ್ ​​ನಲ್ಲಿ ಧರ್ಮಸ್ಥಳದ ಆಕಾಂಕ್ಷ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಈಗಾಗಲೇ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆಕಾಂಕ್ಷ ಸಾವಿನಲ್ಲಿ ಕಾಲೇಜಿನ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್​ ಮಾನ್ ​ಗೆ ಮೃತಾ ಆಕಾಂಕ್ಷ ಪೋಷಕರು ಪತ್ರ ಬರೆದಿದ್ದು, ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ಎಲ್ ​​ಪಿಸಿ ಕ್ಯಾಂಪಸ್ ​ನಲ್ಲಿ ಇದೇ ರೀತಿ ಹಲವು ಅಸಹಜ ಸಾವುಗಳಾಗಿವೆ. ಇದರಲ್ಲಿ ಕಾಲೇಜಿನ ಕೈವಾಡ ಹೆಚ್ಚಾಗಿ ಕಂಡು ಬರುತ್ತಿದೆ. ಸರಿಯಾದ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರುತ್ತದೆ. ಸರಿಯಾಗಿ ತನಿಖೆ ನಡೆಸುವಂತೆ ಪಂಜಾಬ್​ ಸಿಎಂಗೆ ಆಕೆಯ ಪೋಷಕರು ಪತ್ರ ಬರೆದಿದ್ದಾರೆ.

ಇನ್ನು ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಆಕಾಂಕ್ಷ ಪೋಷಕರು ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ ಮಾಡಿದ್ದಾರೆ. ಇನ್ನು ಕೂಡ ಎಫ್ ​​ಐಆರ್​​ ದಾಖಲಾಗಿಲ್ಲ. ಎಫ್ ​ಐಆರ್​ ದಾಖಲಾಗದಿರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ಆಗಿಲ್ಲ.

ಕಾಲೇಜಿನವರು ನೀಡಿದ ಮಾಹಿತಿ ಆಧಾರದಲ್ಲಿ ಎಫ್ ​ಐಆರ್​ ಮಾಡಲು ಬಿಡುವುದಿಲ್ಲವೆಂದು ಪೋಷಕರು ಪಟ್ಟು ಹಿಡಿದಿದ್ದು, ಇತ್ತ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರೊಫೆಸರ್ ವಿರುದ್ಧ ಎಫ್ ​​ಐಆರ್ ಹಾಕಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇದರಿಂದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಕಾಂಕ್ಷ ಪೋಷಕರು ದೂರು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆಕಾಂಕ್ಷ ಪೋಷಕರನ್ನು ಜಲಂಧರ್​ನ ಡಿಐಜಿ ನವೀನ್ ಸಿಂಗ್ಲಾ ಮತ್ತು ಎಸ್​​ಪಿ ರೂರೇಂಧರ್​ ಭಾಟ್ಟಿ ಕೌರ್ ಭೇಟಿ ಮಾಡಿದ್ದಾರೆ. ಈ ವೇಳೆ ಘಟನೆಯನ್ನು ವಿವರಿಸಿ ಪೋಷಕರ ಅಹವಾಲು ಸ್ವೀಕರಿಸಿದ್ದಾರೆ. ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಉಗುಳುವವರಿಂದ 3 ತಿಂಗಳಲ್ಲಿ ಬರೋಬ್ಬರಿ 32 ಲಕ್ಷ ರೂ. ದಂಡ ವಸೂಲಿ..! ಅಧಿಕಾರಿಗಳಿಂದ ಮಹತ್ವದ ಮಾಹಿತಿ

ಮದುವೆಯಾಗಿ ಗಂಡನ ಮನೆಗೆ ಬಂದ ಮರುದಿನವೇ ಚಿನ್ನಾಭರಣ, ಹಣ ದೋಚಿ ವದು ಪರಾರಿ..! ದೂರು ದಾಖಲಿಸಿದ ಪತಿ..!

See also  ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ..! ತನ್ನದೇ ಸಹಚರನಿಗೂ ಗುಂಡು ಹಾರಿಸಿದ ಕಳ್ಳ..!
  Ad Widget   Ad Widget     Ad Widget   Ad Widget   Ad Widget   Ad Widget