ಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್ ಪ್ರಕರಣ: ಮಧ್ಯರಾತ್ರಿ ತಂದೆಯ ಅಂತ್ಯಕ್ರಿಯೆ ನೆರವೇರಿಸಿದ ರೇಣುಕಾಸ್ವಾಮಿ ಕೊಲೆ ಆರೋಪಿ..! ಮಗನ ಬಂಧನದ ವಿಷಯ ತಿಳಿದು ತಂದೆಗೆ ಹೃದಯಾಘಾತ..!

265

ನ್ಯೂಸ್ ನಾಟೌಟ್: ನಟ ದರ್ಶನ್ (Darshan Thoogudeepa) ಮತ್ತು ಗ್ಯಾಂಗ್ ನಲ್ಲಿ ಒಬ್ಬನಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಅನುಕುಮಾರ್ ಎಂಬಾತ ತನ್ನ​ ತಂದೆ ಚಂದ್ರಣ್ಣ (60) ಎಂಬವರ ಅಂತ್ಯಕ್ರಿಯೆಗೆ ಶನಿವಾರ(ಜೂ.15) ಮಧ್ಯರಾತ್ರಿ ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ರುದ್ರಭೂಮಿಗೆ ಬಂದು ಕಾರ್ಯ ನೆರವೇರಿಸಿದ್ದಾನೆ. ತಂದೆಯ ಅಂತ್ಯಕ್ತಿಯೆಯಲ್ಲಿ ಆರೋಪಿ ಅನುಕುಮಾರ್​ ಭಾಗವಹಿಸಿದ್ದರು.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಂಡು ತಾಯಿ ಕಣ್ಣೀರಿಟ್ಟರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ7 ಅನುಕುಮಾರ್​ ಬಂಧಿತರಾಗಿದ್ದನ್ನು ತಿಳಿದು ಅವರ ತಂದೆ ಚಂದ್ರಣ್ಣ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿಯನ್ನು ಅಪಹರಿಸಿದ್ದ ನಾಲ್ವರು ಆರೋಪಿಗಳು ಎ4 ರಘು, ಎ6 ಜಗದೀಶ್, ಎ7 ಅನು, ಎ8 ರವಿಯನ್ನು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಅನುಕುಮಾರ್​ ಹೊರತುಪಡಿಸಿ ಉಳಿದ ಆರೋಪಿಗಳನ್ನು ಖಾಸಗಿ ಹೋಟೆಲ್​​ನಲ್ಲಿ ಇರಿಸಲಾಗಿದೆ. ಅಂತ್ಯಕ್ರಿಯೆ ನೆರವೇರಿದ ಬಳಿಕ ಚಿತ್ರದುರ್ಗದಲ್ಲೂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ ಎನ್ನಲಾಗಿದೆ.

Click 👇

https://newsnotout.com/2024/06/darshan-and-gang-issue-gold-kannada-news
https://newsnotout.com/2024/06/hair-cutting-shop-owner-misbehaviour-police-issue
https://newsnotout.com/2024/06/viral-news-company-interview-kannada-news
See also  ಉಡುಪಿ: ಕೂಡಲೇ ಶರಣಾಗಿ ಇಲ್ಲದಿದ್ರೆ ಕಾರ್ಯಾಚರಣೆ ತೀವ್ರಗೊಳಿಸ್ತೇವೆ ಎಂದು ಕಾಡಲ್ಲಿ ಅವಿತಿರುವ ನಕ್ಸಲರಿಗೆ ಡಿಜಿಪಿ ಎಚ್ಚರಿಕೆ..! ವಿಕ್ರಂ ಗೌಡ ಎನ್‌ ಕೌಂಟರ್ ಬಳಿಕ ಚುರುಕುಗೊಂಡ ಕಾರ್ಯಾಚರಣೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget