ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ ಎಂದ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಖಡಕ್ ಸೂಚನೆ..!

ನ್ಯೂಸ್ ನಾಟೌಟ್: ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರಗೊಂಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ&ಐಜಿಪಿ ಅಲೋಕ್​ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್​ ಸೂಚನೆ ನೀಡಿದರು.
ಕೂಡಲೆ ದರ್ಶನ್ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ​​ನಲ್ಲಿ ಟ್ವೀಟ್​​ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತ್ತು ಮಾಡುವಂತೆ ಸೂಚಿಸಿದ್ದೇನೆ” ಎಂದಿದ್ದಾರೆ.

“ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್​ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿದ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಎಂದು ಖಡಕ್​ ಸೂಚನೆ ನೀಡಿದ್ದಾರೆ.

Click

https://newsnotout.com/2024/08/kasaragodu-govt-kananda-news-engineer-viral-news/
https://newsnotout.com/2024/08/facebook-post-kannada-news-bangladesh-video-kannada-news-agent/
https://newsnotout.com/2024/08/mysore-note-print-office-kannada-news-employement/

Related posts

ಮೊಸಳೆ ಬಾಯಿಯಿಂದ ತನ್ನ ಕಂದನನ್ನು ರಕ್ಷಿಸಿದ ತಾಯಿ ಆನೆ..! ಇಲ್ಲಿದೆ ವೈರಲ್ ವಿಡಿಯೋ

ಮಂಗಳೂರು : ನವರಾತ್ರಿ ಉತ್ಸವದಲ್ಲಿ ಜಾತ್ರೆ ಅಂಗಡಿಗಳಿಗೆ ಕೇಸರಿ ದ್ವಜ ನೆಟ್ಟ ಪ್ರಕರಣಕ್ಕೆ ಟ್ವಿಸ್ಟ್! ಶರಣ್ ಪಂಪ್‌ವೆಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದ್ದೇಕೆ?

ಸೌದಿ ಅರೇಬಿಯಾದಲ್ಲಿ ಅಪಘಾತ: ವಿಟ್ಲ ಮೂಲದ ಯುವಕ ಸಾವು