ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಗೆ ಇನ್ನೂ ಆಪರೇಷನ್‌ ಮಾಡಿಲ್ಲ ಯಾಕೆ..? ಹೈಕೋರ್ಟ್‌ ಗೆ ವಕೀಲರಿಂದ ವರದಿ ಸಲ್ಲಿಕೆ..!

180

ನ್ಯೂಸ್‌ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ ಇನ್ನೂ ಮಾನಸಿಕವಾಗಿ ಸಿದ್ಧವಾಗದ ಕಾರಣ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದು ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಅನಾರೋಗ್ಯದ ಕಾರಣ ನೀಡಿದ ದರ್ಶನ್‌ ಅವರಿಗೆ ಹೈಕೋರ್ಟ್‌ 6 ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್‌ ಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಯಾಕೆ ನಡೆದಿಲ್ಲ ಎಂದು ತನಿಖಾಧಿಕಾರಿಗಳು ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದರು. ಈ ಪ್ರಶ್ನೆಗೆ ದರ್ಶನ್‌ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ವರದಿಯಲ್ಲಿ ಹೈಕೋರ್ಟ್‌ಗೆ ಕಾರಣ ನೀಡಿದ್ದಾರೆ.

ದರ್ಶನ್‌ ಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ದರ್ಶನ್ ಕೂಡ ಶಸ್ತ್ರಚಿಕಿತ್ಸೆಗೆ ತಯಾರಾಗುತ್ತಿದ್ದಾರೆ. ಆದರೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಆಪರೇಷನ್‌ ಮಾಡಬೇಕಾದರೆ ರಕ್ತದೊತ್ತಡ ಸಮತೋಲನ ಆಗಿರಬೇಕು.

ದರ್ಶನ್ ರಕ್ತದೊತ್ತಡದ ಸಮಸ್ಯೆ ಸಮತೋಲನಕ್ಕೆ ಬರುತ್ತಿಲ್ಲ. ಇನ್ನೂ ದರ್ಶನ್ ಕೂಡ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ. ಸದ್ಯಕ್ಕೆ ಕನ್ಸರ್ವೇಟಿವ್ ಚಿಕಿತ್ಸೆ ಮುಂದುವರೆದಿದೆ. ಫಿಸಿಯೋಥೆರಪಿ ಮತ್ತು ಔಷಧಗಳಿಂದ ಸಮಸ್ಯೆ ನಿಯಂತ್ರಣದಲ್ಲಿಡುವ ಪ್ರಯತ್ನ ನಡೆಯುತ್ತಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಈ ಹಿಂದೆ ದರ್ಶನ್ ಪರ ವಕೀಲರು ಮೂರು ತಿಂಗಳ ಜಾಮೀನು ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಾತ್ರ ಮಂಜೂರು ಮಾಡಿ ದರ್ಶನ್‌ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿತ್ತು.

Click

https://newsnotout.com/2024/11/kasaragodu-family-issue-women-police-nomore-by-husband-kannada-news-fn/
See also  Shakthi Yojane Effect : ದಿನಕ್ಕೆ ಕೇವಲ 40 ರೂ. ಸಂಪಾದನೆ,ಆಟೋ ಚಾಲಕನೊಬ್ಬನ ಕಣ್ಣೀರ ಕಥೆ ಇದು..
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget