Latest

ಜೈಲಿನಲ್ಲಿ ನಟ ದರ್ಶನ್ ಗೆ ನರಕ ದರ್ಶನ, ಕಟ್ಟು ನಿಟ್ಟಿನ ಕ್ರಮಕ್ಕೆ ಸುಸ್ತಾದ ದಾಸ..!

1.1k

ನ್ಯೂಸ್ ನಾಟೌಟ್: ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾ ಜೈಲಿನಲ್ಲಿ ಇಡಲಾಗಿದೆ.

ದರ್ಶನ್​ ಆರಂಭದಲ್ಲಿ ಇಲ್ಲೇ ಇದ್ದರು. ಅವರಿಗೆ ಐಷಾರಾಮಿ ಸವಲತ್ತು ಒದಗಿಸಲಾಯಿತು. ಇದರ ಫೋಟೋಗಳು ಕೂಡ ವೈರಲ್ ಆದವು. ಈ ಪ್ರಕರಣದಲ್ಲಿ ಕೇಸ್ ಕೂಡ ದಾಖಲಾಗಿದೆ. ಈ ವಿಚಾರಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ದರ್ಶನ್​ಗೆ ಯಾವುದೇ ಸವಲತ್ತು ಸಿಗದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ಈ ಬಾರಿ ಜೈಲಿನ ಮ್ಯಾನ್ಯುಯಲ್ ಪ್ರಕಾರವೇ ಅಧಿಕಾರಿಗಳು ದರ್ಶನ್​ನ ನಡೆಸಿಕೊಳ್ಳುತ್ತಿದ್ದಾರೆ. ಕಟ್ಟುನಿಟ್ಟಾಗಿ ಅವರಿಗೆ ಜೈಲು ಊಟವನ್ನೇ ನೀಡಬೇಕಿದೆ. ಮನೆಯಿಂದ ಯಾವುದೇ ಊಟವನ್ನು ತರುವಂತಿಲ್ಲ. ಜೈಲಿನ  ಮೆನುವಿನಂತೆ ಊಟ-ತಿಂಡಿ ನೀಡಲಾಗುತ್ತಿದೆ. ಕಳೆದ ಬಾರಿ ಮನೆ ಊಟದ ವ್ಯವಸ್ಥೆ ಇತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ವಾತಾವರಣ ಇದೆ. ಹೀಗಾಗಿ ಹವಾಮಾನ ತಂಪಾಗಿದೆ. ಈ ವೇಳೆ ಹೊದ್ದುಕೊಳ್ಳಲು ಒಂದು ಬೆಡ್​ಶೀಟ್ ಸಾಕಾಗೋದಿಲ್ಲ. ಹೀಗಾಗಿ, ದರ್ಶನ್ ಎರಡು ಬೆಡ್​ಶೀಟ್ ಕೇಳಿದ್ದಾರೆ. ಆದರೆ,  ಜೈಲಿನ ಮ್ಯಾನ್ಯುಯಲ್ ಪ್ರಕಾರ ಒಂದೇ ಬೆಡ್​ ಶೀಟ್ ನೀಡಲಾಗಿದೆ. ನಂತರ ಮರು ಮಾತಾಡದೇ ಅವರು ಒಂದೇ ಬೆಡ್​ಶೀಟ್ ಪಡೆದು ಹೋಗಿದ್ದಾರೆ.

See also  ಬಕ್ರೀದ್ ಹಬ್ಬಕ್ಕೆ ಈ ಮುಸ್ಲಿಂ ರಾಷ್ಟ್ರದಲ್ಲಿ ಕುರಿ ಬಲಿ ನಿಷೇಧ..! ಇಲ್ಲಿದೆ ಕಾರಣ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget