ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿ ನೇಮಕಗೊಂಡಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ ಅತ್ಯಂತ ಸರಳ ಜಿಲ್ಲಾಧಿಕಾರಿಯಾಗಿ ನಗುಮೊಗದಿಂದ ಜನರ ಒಡನಾಡಿಯಾಗಿದ್ದ ಹಾಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರನ್ನು ಬೆಂಗಳೂರಿನ ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿದ್ದ ಯಂಗ್ ಆ್ಯಂಡ್ ಡೈನಾಮಿಕ್ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರನ್ನು ಆಯ್ಕೆ ಮಾಡಲಾಗಿದೆ.