ಕರಾವಳಿ

ಮಂಗಳೂರಲ್ಲಿ ಸತ್ತ ವ್ಯಕ್ತಿ ಕೇರಳದಲ್ಲಿ ಬದುಕಿ ಬಂದ ರೋಚಕ ಘಟನೆ,ವ್ಯಕ್ತಿ ಸತ್ತಿದ್ದಾನೆಂದು ವೈದ್ಯರೇ ಖಚಿತಪಡಿಸಿದ ಬಳಿಕ ಬದುಕೋದಕ್ಕೆ ಹೇಗೆ ಸಾಧ್ಯ?ಇಲ್ಲಿದೆ ವರದಿ

145

ನ್ಯೂಸ್‌ ನಾಟೌಟ್: ಈ ಕಥೆ ಕೇಳಿದ್ರೆ ನಿಜಕ್ಕೂ ನೈಜ ಘಟನೆಯೇ ಎಂದು ಅನ್ನಿಸಬಹುದು. ಆದರೆ ಈ ಘಟನೆ ನಡೆದಿದ್ದು ಮಂಗಳೂರಿನಲ್ಲಿ. ಹೌದು, ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆಂದು ಘೋಷಿಸಲಾಗಿತ್ತು. ವಿಶೇಷವೆಂದರೆ ಸೋಮವಾರ ತಡರಾತ್ರಿ ಕಣ್ಣೂರಿನ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ.ಅರೆ! ಇದು ಹೇಗೆ ಸಾಧ್ಯ ?

ಕೇರಳದ ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಮುಂಜಾನೆ ದಾಖಲು ಮಾಡಲಾಗಿತ್ತು. ಅವರ ಸ್ಥಿತಿಯು ತೀರಾ ಹದಗೆಟ್ಟಿತ್ತು. ಯಾವುದೇ ಸುಧಾರಣೆ ಕಂಡುಬರುತ್ತಿಲ್ಲ, ವೆಂಟಿಲೇಟರ್​ನಿಂದ ತೆಗೆದುಬಿಡುವುದೇ ಒಳ್ಳೆಯದು ಎಂದು ವೈದ್ಯರು ಅಭಿಪ್ರಾಯಪಟ್ಟು ಕುಟುಂಬದವರಿಗೆ ತಿಳಿಸಿದರು. ಸಂಜೆಯ ಹೊತ್ತಿಗೆ ಅವರು ಮೃತಪಟ್ಟಿದ್ದಾರೆಂದು ಘೋಷಿಸಲಾಯಿತು. ದೇಹವನ್ನು ಊರಿಗೆ ಸಾಗಿಸಲು ವ್ಯವಸ್ಥೆಯನ್ನೂ ಮಾಡಲಾಯಿತು.

ಇದಾದ ಬಳಿಕ ಸಂಜೆ 6.30ರ ಸುಮಾರಿಗೆ ಅವರನ್ನು ಆಂಬ್ಯುಲೆನ್ಸ್​ನಲ್ಲಿ ಕಣ್ಣೂರಿಗೆ ಕಳುಹಿಸಲಾಯಿತು. ರಾತ್ರಿ ತುಂಬಾ ತಡವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಸರಿಸುಮಾರು ರಾತ್ರಿ 11.30 ಕ್ಕೆ, ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುವಾಗ, ಕರ್ತವ್ಯದಲ್ಲಿದ್ದ ಅಟೆಂಡರ್ ಜಯನ್ ಅವರು ಶವವನ್ನು ಗಮನಿಸಿದರು.ಆಂಬ್ಯುಲೆನ್ಸ್​ ತೆರೆದಾಗ ಕೈಗಳು ಚಲಿಸುತ್ತಿದ್ದಂತೆ ಭಾಸವಾಗಿತ್ತು.ಅನುಮಾನದಲ್ಲೇ ಎಕೆಜಿ ಆಸ್ಪತ್ರೆಯ ವೈದ್ಯಕೀಯ ತಂಡ ತಕ್ಷಣ ಮಧ್ಯ ಪ್ರವೇಶಿಸಿ ಪವಿತ್ರನ್ ಬದುಕಿರುವುದನ್ನು ಖಚಿತಪಡಿಸಿದರು.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಈ ಘಟನೆಯಿಂದ ಪವಿತ್ರನ್ ಅವರ ಕುಟುಂಬ ಮತ್ತು ಆಸ್ಪತ್ರೆ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ. ಎಕೆಜಿ ಆಸ್ಪತ್ರೆಯ ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯವರು ಮಾಡಿದ ಸಾವಿನ ದೃಢೀಕರಣದ ನಿಖರತೆಯ ಬಗ್ಗೆ ಅನುಮಾನಗಳು ಎದ್ದಿವೆ.

See also  ಸುಳ್ಯ: ಪನ್ನಗನಿಂದ 'ಪಂಗನಾಮ' ಎಫೆಕ್ಟ್..!?ದಿಢೀರ್ ರೊಚ್ಚಿಗೆದ್ದ KSRTC ಬಸ್ ಡ್ರೈವರ್ಸ್, ನಾಳೆ ರಸ್ತೆಗಿಳಿಯಲ್ಲ ಗ್ರಾಮೀಣ ಸಾರಿಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget