ಕರಾವಳಿ

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ಕಣ್ಣೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಯಿತು. ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಹಾಗೂ ವಿಮಾನಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ. ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಬೇರೆ ವಿಮಾನಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಇಲ್ಲಿನ ಹೊಟೇಲ್‌ಗಳಲ್ಲಿ ಇರಿಸಲಾಗಿದ್ದು ಮಂಗಳವಾರ ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.

Related posts

ಉಡುಪಿ : ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಸವಾರ ಸಾವು

ಮಂಗಳೂರು: ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ವೇಳೆ ಅವಘಡ..! ಬಾವಿಗೆ ಬಿದ್ದು ಮೀನುಗಾರ ಸಾವು..!

ಮಂಗಳೂರು: ₹500ರ ಗಡಿಯತ್ತ ಕೆ.ಜಿ. ಅಡಿಕೆ ಬೆಲೆ, ಅಡಿಕೆ ಬೆಳೆಗಾರನ ಮುಖದಲ್ಲಿ ನಗುವೋ ನಗು..!