ಕರಾವಳಿಕ್ರೈಂ

ಯುವಕನ ಕೊಲೆ ಮಾಡಿ ಗುಡ್ಡದಲ್ಲಿ ಎಸೆದಿದ್ದ ನಾಲ್ವರ ಬಂಧನ, ಗಾಂಜಾ ಗಲಾಟೆ ತಂದಿತ್ತು ಪ್ರಾಣಕ್ಕೇ ಕುತ್ತು..!

202

ನ್ಯೂಸ್ ನಾಟೌಟ್: ಮಾದಕ ವಸ್ತುವಿನ ಗಲಾಟೆಯಲ್ಲಿ ಯುವಕನ ಕೊಂದು ಗುಡ್ಡದಲ್ಲಿ ಹೆಣ ಎಸೆದು ಹೋಗಿರುವಂತಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ.

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣ ಪೊಲೀಸರಿಗೆ ಭಾರಿ ತಲೆನೋವಿಗೆ ಕಾರಣವಾಗಿತ್ತು. ಆದರೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು ಮಂಚಿ ಗ್ರಾಮದ ನಾಲ್ವರ ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ದಾವೂದ್ ಅಮೀರ್ (25 ವರ್ಷ) , ಅಬ್ದುಲ್ ರಹೀಜ್ (23 ವರ್ಷ), ಆಫ್ರಿದಿ (23 ವರ್ಷ), ಮಹಮ್ಮದ್ ಇರ್ಷಾದ್ ( 20 ವರ್ಷ) ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ. ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು. ದಕ್ಷಿಣ ಕನ್ನ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

See also  ಪ್ರವಾಹ ಸಂತ್ರಸ್ತರಿಗೊಂದು ಮಹತ್ವದ ಮಾಹಿತಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget